ಮಂಗಳೂರಿನಲ್ಲಿ ರುಚಿ ಅಭಿರುಚಿ ಪಾಕ ಸ್ಪರ್ಧೆ

By Staff

Zee Kananda Ruchi Abhiruchi, Mangalore special
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಿಳೆಯರ ಮೆಚ್ಚಿನ ಅಡುಗೆ ಕಾರ್ಯಕ್ರಮ ರುಚಿ ಅಭಿರುಚಿ ಈಗ ಮಂಗಳೂರಿನಲ್ಲಿ. ಪ್ರತಿ ಜಿಲ್ಲೆಯ ವಿಶೇಷ ಅಡಿಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ, ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ.

29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಕರ್ನಾಟಕದ ಕರಾವಳಿ ಜಿಲ್ಲೆ ಎಂದೇ ಖ್ಯಾತಿಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಗೆ ರುಚಿ ಅಭಿರುಚಿ ತಂಡ ಆಗಮಿಸಲಿದೆ.

ದಿನಾಂಕ 12 ಡಿಸೆಂಬರ್, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಗ್ಯಾಲರಿ ಹಾಲ್‌ನಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಸ್ಥಳದಲ್ಲಿಯೇ ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಅಕಾಂಕ್ಷಿಗಳೇ ಖುದ್ದಾಗಿ ತರಬೇಕು.

ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97411 58120, 97411 58124 ಹಾಗೂ99001 49970 ಸಂಚಾರಿವಾಣಿಗಳನ್ನು ಅಥವಾ 080-2686 0292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.

ಸೂಚನೆ:

ಮುಂದೆ ಆಯ್ಕೆ ಪ್ರಕ್ರಿಯೆ ನಡೆಯಬಹುದಾದ ತಾತ್ಕಾಲಿಕ ಪಟ್ಟಿ. (ಇನ್ನು ಸ್ಥಳ ನಿಗದಿಯಾಗಿಲ್ಲ)
ದಿನಾಂಕ 14 ಡಿಸೆಂಬರ್, ಸೋಮವಾರ ಉಡುಪಿ.
ದಿನಾಂಕ 19 ಡಿಸೆಂಬರ್, ಶನಿವಾರ ಮಡಿಕೇರಿ.
ದಿನಾಂಕ 04 ಜನೆವರಿ, ಸೋಮವಾರ ಹಾಸನ.

ಮಾಧ್ಯಮ ಸಂಪರ್ಕ : ಮಧುಸೂಧನ್.ವಿ, 99002 89844

Story first published: Monday, December 7, 2009, 16:56 [IST]
X
Desktop Bottom Promotion