Latest Updates
-
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್
ಮಂಗಳೂರಿನಲ್ಲಿ ರುಚಿ ಅಭಿರುಚಿ ಪಾಕ ಸ್ಪರ್ಧೆ

29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಕರ್ನಾಟಕದ ಕರಾವಳಿ ಜಿಲ್ಲೆ ಎಂದೇ ಖ್ಯಾತಿಗಳಿಸಿರುವ ದಕ್ಷಿಣ ಕನ್ನಡ ಜಿಲ್ಲೆಗೆ ರುಚಿ ಅಭಿರುಚಿ ತಂಡ ಆಗಮಿಸಲಿದೆ.
ದಿನಾಂಕ 12 ಡಿಸೆಂಬರ್, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ ಗ್ಯಾಲರಿ ಹಾಲ್ನಲ್ಲಿ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಸ್ಥಳದಲ್ಲಿಯೇ ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಅಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97411 58120, 97411 58124 ಹಾಗೂ99001 49970 ಸಂಚಾರಿವಾಣಿಗಳನ್ನು ಅಥವಾ 080-2686 0292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಸೂಚನೆ:
ಮುಂದೆ ಆಯ್ಕೆ ಪ್ರಕ್ರಿಯೆ ನಡೆಯಬಹುದಾದ ತಾತ್ಕಾಲಿಕ ಪಟ್ಟಿ. (ಇನ್ನು ಸ್ಥಳ ನಿಗದಿಯಾಗಿಲ್ಲ)
ದಿನಾಂಕ 14 ಡಿಸೆಂಬರ್, ಸೋಮವಾರ ಉಡುಪಿ.
ದಿನಾಂಕ 19 ಡಿಸೆಂಬರ್, ಶನಿವಾರ ಮಡಿಕೇರಿ.
ದಿನಾಂಕ 04 ಜನೆವರಿ, ಸೋಮವಾರ ಹಾಸನ.
ಮಾಧ್ಯಮ ಸಂಪರ್ಕ : ಮಧುಸೂಧನ್.ವಿ, 99002 89844



Click it and Unblock the Notifications