Latest Updates
-
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ!
ತೆಲಂಗಾಣ ಸ್ಟೈಲ್ ರೆಸ್ಟೋರೆಂಟ್

ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಂಗಳೂರಿನಲ್ಲಿ ಆಂಧ್ರ ಸ್ಟೈಲ್ ಫುಡ್, ಆಂಧ್ರ ಸ್ಟೈಲ್ ರೆಸ್ಟೋರೆಂಟು ಮತ್ತು ಹೋಟೆಲುಗಳಿವೆ. ಇಲ್ಲಿ ವಿಶೇಷವಾಗಿ ನಂದಿನಿ ಹೋಟೆಲುಗಳ ಸಮೂಹನ್ನು ಹೆಸರಿಸಬಹುದಾಗಿದೆ. ಬಾಳೆ ಎಲೆ ಮೇಲೆ ಫುಲ್ ಮೀಲ್ಸ್ ಸಸ್ಯಾಹಾರ ಮತ್ತು ಮಾಂಸಾಹಾರದ ರುಚಿಗಳನ್ನು ಬಡಿಸುವ ಪದ್ದತಿ ಆರಂಭಿಸಿದ್ದು ಇವೇ ಹೋಟೆಲುಗಳು.
ಈ ಹೋಟೆಲುಗಳು ಮೊದಮೊದಲು ಜನತೆಯನ್ನು ಆಕರ್ಷಿಸಿದರೂ ಈಚೆಗೆ ಅರ್ಧ ಬೆಂದ ಅನ್ನ ಮತ್ತು ಚಪ್ಪೆಚಪ್ಪೆ ಬಿರಿಯಾನಿ ಊಟ ಹಾಕುತ್ತಿರುವುದರಿಂದ ಜನ ಬೇಸತ್ತಿದ್ದಾರೆ. ಸದ್ಯಕ್ಕೆ ವಿಷಯ ಅದಲ್ಲ. ಪ್ರತ್ಯೇಕ ತೆಲಂಗಾಣ ರಾಜ್ಯ ವಿದ್ಯುಕ್ತವಾಗಿ ಅನಾವರಣಗೊಂಡರೆ ಬೆಂಗಳೂರಿನಲ್ಲಿ ತೆಲಂಗಾಣ ಹೋಟೆಲುಗಳು ಕಾಣಿಸುಕೊಳ್ಳುತ್ತವೆಯೇ ಎಂಬುದು ನಮ್ಮ ಕುತೂಹಲ. ಹಾಗೊಮ್ಮೆ ತೆಲಂಗಾಣ ರೆಸ್ಟೋರೆಂಟುಗಳು ಆರಂಭಗೊಂಡರೆ ಆಂಧ್ರ ಸ್ಟ್ಯೈಲ್ ಹೋಟೆಲುಗಳಿಗೆ ಸಖತ್ ಕಾಂಪಿಟಿಷನ್ ಒಡ್ಡುವುದು ಖಂಡಿತ.
ಕುತೂಹಲ ತಣಿಸಿಕೊಳ್ಳಲು ನಮ್ಮ ದಟ್ಸ್ ತೆಲುಗು ಡಾಟ್ ಕಾಂನ ಸಂಪಾದಕ ಶಾಂತಾರಾಂ ಅವರನ್ನು ಸಂಪರ್ಕಿಸಲಾಯಿತು. ಈ ಬಗ್ಗೆ ಅಧಿಕೃತವಾಗಿ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಕೈಚೆಲ್ಲಿದ್ದಾರೆ. ಇಂದು ಬೆಳಗಿನ ಜಾವವಷ್ಟೇ ಚಂದ್ರಶೇಖರರಾವ್ ಅವರು ಎಳನೀರು ಬ್ರೇಕ್ ಫಾಸ್ಟ್ ಮಾಡಿದ್ದಾರೆ. ನಂತರದ ಬೆಳವಣಿಗೆಗಳನ್ನು ಆನಂತರ ಈಮೇಲಿನಲ್ಲಿ ಕಳಿಸಲಾಗುವುದು ಎಂದಷ್ಟೇ ಹೇಳಿ ಅವರು ಫೋನ್ ಅಫ್ ಮಾಡಿದರು.



Click it and Unblock the Notifications