Latest Updates
-
ಬಾಲ್ಕನಿ ಅಲಂಕಾರ: ಹಬ್ಬದ ಸಂಭ್ರಮಕ್ಕೆ 10 ನಿಮಿಷದ ಮ್ಯಾಜಿಕ್ -
ಬಿಸಿಲಿನ ಬೇಗೆಗೆ ಈ ಪಾನೀಯಗಳೇ ಮದ್ದು, ತಂಪಾಗಿರಿ ಹೀಗೆ! -
ಬೈಸಾಕಿ ಮತ್ತು ವಿಷು ಹಬ್ಬದ ಲುಕ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ತೆಲಂಗಾಣ ಬಿಸಿಲ ಬೇಗೆ: ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ -
MI vs RCB ಮ್ಯಾಚ್ ನೋಡುವಾಗ ದಂಪತಿಗಳ ಜಗಳ ತಪ್ಪಿಸುವುದು ಹೇಗೆ? -
ವಿಷು, ಬೈಸಾಖಿ ಹಬ್ಬಕ್ಕೆ ನಿಮ್ಮ ಮನೆ ಮಿಂಚಬೇಕೆ? ಈ ಟಿಪ್ಸ್ ಫಾಲೋ ಮಾಡಿ -
ಗರ್ಭಿಣಿಯರ ಆಹಾರ ಕ್ರಮ: ಮಗುವಿನ ಆರೋಗ್ಯಕ್ಕೆ ಈ ಬದಲಾವಣೆ ಕಡ್ಡಾಯ! -
ಬೇಸಿಗೆ ಬಿಸಿಲಿಗೆ ತಂಪಾಗಲು ವೈರಲ್ ಆಗುತ್ತಿರುವ ಫ್ಯಾಷನ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಿಸಿ -
ಹಬ್ಬದ ಫ್ಯಾಷನ್ ಟ್ರೆಂಡ್ಸ್: ಈ ಲುಕ್ ಟ್ರೈ ಮಾಡಿ ಮಿಂಚಿ
ತೆಲಂಗಾಣ ಸ್ಟೈಲ್ ರೆಸ್ಟೋರೆಂಟ್

ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಂಗಳೂರಿನಲ್ಲಿ ಆಂಧ್ರ ಸ್ಟೈಲ್ ಫುಡ್, ಆಂಧ್ರ ಸ್ಟೈಲ್ ರೆಸ್ಟೋರೆಂಟು ಮತ್ತು ಹೋಟೆಲುಗಳಿವೆ. ಇಲ್ಲಿ ವಿಶೇಷವಾಗಿ ನಂದಿನಿ ಹೋಟೆಲುಗಳ ಸಮೂಹನ್ನು ಹೆಸರಿಸಬಹುದಾಗಿದೆ. ಬಾಳೆ ಎಲೆ ಮೇಲೆ ಫುಲ್ ಮೀಲ್ಸ್ ಸಸ್ಯಾಹಾರ ಮತ್ತು ಮಾಂಸಾಹಾರದ ರುಚಿಗಳನ್ನು ಬಡಿಸುವ ಪದ್ದತಿ ಆರಂಭಿಸಿದ್ದು ಇವೇ ಹೋಟೆಲುಗಳು.
ಈ ಹೋಟೆಲುಗಳು ಮೊದಮೊದಲು ಜನತೆಯನ್ನು ಆಕರ್ಷಿಸಿದರೂ ಈಚೆಗೆ ಅರ್ಧ ಬೆಂದ ಅನ್ನ ಮತ್ತು ಚಪ್ಪೆಚಪ್ಪೆ ಬಿರಿಯಾನಿ ಊಟ ಹಾಕುತ್ತಿರುವುದರಿಂದ ಜನ ಬೇಸತ್ತಿದ್ದಾರೆ. ಸದ್ಯಕ್ಕೆ ವಿಷಯ ಅದಲ್ಲ. ಪ್ರತ್ಯೇಕ ತೆಲಂಗಾಣ ರಾಜ್ಯ ವಿದ್ಯುಕ್ತವಾಗಿ ಅನಾವರಣಗೊಂಡರೆ ಬೆಂಗಳೂರಿನಲ್ಲಿ ತೆಲಂಗಾಣ ಹೋಟೆಲುಗಳು ಕಾಣಿಸುಕೊಳ್ಳುತ್ತವೆಯೇ ಎಂಬುದು ನಮ್ಮ ಕುತೂಹಲ. ಹಾಗೊಮ್ಮೆ ತೆಲಂಗಾಣ ರೆಸ್ಟೋರೆಂಟುಗಳು ಆರಂಭಗೊಂಡರೆ ಆಂಧ್ರ ಸ್ಟ್ಯೈಲ್ ಹೋಟೆಲುಗಳಿಗೆ ಸಖತ್ ಕಾಂಪಿಟಿಷನ್ ಒಡ್ಡುವುದು ಖಂಡಿತ.
ಕುತೂಹಲ ತಣಿಸಿಕೊಳ್ಳಲು ನಮ್ಮ ದಟ್ಸ್ ತೆಲುಗು ಡಾಟ್ ಕಾಂನ ಸಂಪಾದಕ ಶಾಂತಾರಾಂ ಅವರನ್ನು ಸಂಪರ್ಕಿಸಲಾಯಿತು. ಈ ಬಗ್ಗೆ ಅಧಿಕೃತವಾಗಿ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಕೈಚೆಲ್ಲಿದ್ದಾರೆ. ಇಂದು ಬೆಳಗಿನ ಜಾವವಷ್ಟೇ ಚಂದ್ರಶೇಖರರಾವ್ ಅವರು ಎಳನೀರು ಬ್ರೇಕ್ ಫಾಸ್ಟ್ ಮಾಡಿದ್ದಾರೆ. ನಂತರದ ಬೆಳವಣಿಗೆಗಳನ್ನು ಆನಂತರ ಈಮೇಲಿನಲ್ಲಿ ಕಳಿಸಲಾಗುವುದು ಎಂದಷ್ಟೇ ಹೇಳಿ ಅವರು ಫೋನ್ ಅಫ್ ಮಾಡಿದರು.



Click it and Unblock the Notifications











