Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ತೆಲಂಗಾಣ ಸ್ಟೈಲ್ ರೆಸ್ಟೋರೆಂಟ್

ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಂಗಳೂರಿನಲ್ಲಿ ಆಂಧ್ರ ಸ್ಟೈಲ್ ಫುಡ್, ಆಂಧ್ರ ಸ್ಟೈಲ್ ರೆಸ್ಟೋರೆಂಟು ಮತ್ತು ಹೋಟೆಲುಗಳಿವೆ. ಇಲ್ಲಿ ವಿಶೇಷವಾಗಿ ನಂದಿನಿ ಹೋಟೆಲುಗಳ ಸಮೂಹನ್ನು ಹೆಸರಿಸಬಹುದಾಗಿದೆ. ಬಾಳೆ ಎಲೆ ಮೇಲೆ ಫುಲ್ ಮೀಲ್ಸ್ ಸಸ್ಯಾಹಾರ ಮತ್ತು ಮಾಂಸಾಹಾರದ ರುಚಿಗಳನ್ನು ಬಡಿಸುವ ಪದ್ದತಿ ಆರಂಭಿಸಿದ್ದು ಇವೇ ಹೋಟೆಲುಗಳು.
ಈ ಹೋಟೆಲುಗಳು ಮೊದಮೊದಲು ಜನತೆಯನ್ನು ಆಕರ್ಷಿಸಿದರೂ ಈಚೆಗೆ ಅರ್ಧ ಬೆಂದ ಅನ್ನ ಮತ್ತು ಚಪ್ಪೆಚಪ್ಪೆ ಬಿರಿಯಾನಿ ಊಟ ಹಾಕುತ್ತಿರುವುದರಿಂದ ಜನ ಬೇಸತ್ತಿದ್ದಾರೆ. ಸದ್ಯಕ್ಕೆ ವಿಷಯ ಅದಲ್ಲ. ಪ್ರತ್ಯೇಕ ತೆಲಂಗಾಣ ರಾಜ್ಯ ವಿದ್ಯುಕ್ತವಾಗಿ ಅನಾವರಣಗೊಂಡರೆ ಬೆಂಗಳೂರಿನಲ್ಲಿ ತೆಲಂಗಾಣ ಹೋಟೆಲುಗಳು ಕಾಣಿಸುಕೊಳ್ಳುತ್ತವೆಯೇ ಎಂಬುದು ನಮ್ಮ ಕುತೂಹಲ. ಹಾಗೊಮ್ಮೆ ತೆಲಂಗಾಣ ರೆಸ್ಟೋರೆಂಟುಗಳು ಆರಂಭಗೊಂಡರೆ ಆಂಧ್ರ ಸ್ಟ್ಯೈಲ್ ಹೋಟೆಲುಗಳಿಗೆ ಸಖತ್ ಕಾಂಪಿಟಿಷನ್ ಒಡ್ಡುವುದು ಖಂಡಿತ.
ಕುತೂಹಲ ತಣಿಸಿಕೊಳ್ಳಲು ನಮ್ಮ ದಟ್ಸ್ ತೆಲುಗು ಡಾಟ್ ಕಾಂನ ಸಂಪಾದಕ ಶಾಂತಾರಾಂ ಅವರನ್ನು ಸಂಪರ್ಕಿಸಲಾಯಿತು. ಈ ಬಗ್ಗೆ ಅಧಿಕೃತವಾಗಿ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಕೈಚೆಲ್ಲಿದ್ದಾರೆ. ಇಂದು ಬೆಳಗಿನ ಜಾವವಷ್ಟೇ ಚಂದ್ರಶೇಖರರಾವ್ ಅವರು ಎಳನೀರು ಬ್ರೇಕ್ ಫಾಸ್ಟ್ ಮಾಡಿದ್ದಾರೆ. ನಂತರದ ಬೆಳವಣಿಗೆಗಳನ್ನು ಆನಂತರ ಈಮೇಲಿನಲ್ಲಿ ಕಳಿಸಲಾಗುವುದು ಎಂದಷ್ಟೇ ಹೇಳಿ ಅವರು ಫೋನ್ ಅಫ್ ಮಾಡಿದರು.



Click it and Unblock the Notifications











