Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ತೆಲಂಗಾಣ ಸ್ಟೈಲ್ ರೆಸ್ಟೋರೆಂಟ್

ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಂಗಳೂರಿನಲ್ಲಿ ಆಂಧ್ರ ಸ್ಟೈಲ್ ಫುಡ್, ಆಂಧ್ರ ಸ್ಟೈಲ್ ರೆಸ್ಟೋರೆಂಟು ಮತ್ತು ಹೋಟೆಲುಗಳಿವೆ. ಇಲ್ಲಿ ವಿಶೇಷವಾಗಿ ನಂದಿನಿ ಹೋಟೆಲುಗಳ ಸಮೂಹನ್ನು ಹೆಸರಿಸಬಹುದಾಗಿದೆ. ಬಾಳೆ ಎಲೆ ಮೇಲೆ ಫುಲ್ ಮೀಲ್ಸ್ ಸಸ್ಯಾಹಾರ ಮತ್ತು ಮಾಂಸಾಹಾರದ ರುಚಿಗಳನ್ನು ಬಡಿಸುವ ಪದ್ದತಿ ಆರಂಭಿಸಿದ್ದು ಇವೇ ಹೋಟೆಲುಗಳು.
ಈ ಹೋಟೆಲುಗಳು ಮೊದಮೊದಲು ಜನತೆಯನ್ನು ಆಕರ್ಷಿಸಿದರೂ ಈಚೆಗೆ ಅರ್ಧ ಬೆಂದ ಅನ್ನ ಮತ್ತು ಚಪ್ಪೆಚಪ್ಪೆ ಬಿರಿಯಾನಿ ಊಟ ಹಾಕುತ್ತಿರುವುದರಿಂದ ಜನ ಬೇಸತ್ತಿದ್ದಾರೆ. ಸದ್ಯಕ್ಕೆ ವಿಷಯ ಅದಲ್ಲ. ಪ್ರತ್ಯೇಕ ತೆಲಂಗಾಣ ರಾಜ್ಯ ವಿದ್ಯುಕ್ತವಾಗಿ ಅನಾವರಣಗೊಂಡರೆ ಬೆಂಗಳೂರಿನಲ್ಲಿ ತೆಲಂಗಾಣ ಹೋಟೆಲುಗಳು ಕಾಣಿಸುಕೊಳ್ಳುತ್ತವೆಯೇ ಎಂಬುದು ನಮ್ಮ ಕುತೂಹಲ. ಹಾಗೊಮ್ಮೆ ತೆಲಂಗಾಣ ರೆಸ್ಟೋರೆಂಟುಗಳು ಆರಂಭಗೊಂಡರೆ ಆಂಧ್ರ ಸ್ಟ್ಯೈಲ್ ಹೋಟೆಲುಗಳಿಗೆ ಸಖತ್ ಕಾಂಪಿಟಿಷನ್ ಒಡ್ಡುವುದು ಖಂಡಿತ.
ಕುತೂಹಲ ತಣಿಸಿಕೊಳ್ಳಲು ನಮ್ಮ ದಟ್ಸ್ ತೆಲುಗು ಡಾಟ್ ಕಾಂನ ಸಂಪಾದಕ ಶಾಂತಾರಾಂ ಅವರನ್ನು ಸಂಪರ್ಕಿಸಲಾಯಿತು. ಈ ಬಗ್ಗೆ ಅಧಿಕೃತವಾಗಿ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಕೈಚೆಲ್ಲಿದ್ದಾರೆ. ಇಂದು ಬೆಳಗಿನ ಜಾವವಷ್ಟೇ ಚಂದ್ರಶೇಖರರಾವ್ ಅವರು ಎಳನೀರು ಬ್ರೇಕ್ ಫಾಸ್ಟ್ ಮಾಡಿದ್ದಾರೆ. ನಂತರದ ಬೆಳವಣಿಗೆಗಳನ್ನು ಆನಂತರ ಈಮೇಲಿನಲ್ಲಿ ಕಳಿಸಲಾಗುವುದು ಎಂದಷ್ಟೇ ಹೇಳಿ ಅವರು ಫೋನ್ ಅಫ್ ಮಾಡಿದರು.



Click it and Unblock the Notifications