Just In
- 4 hrs ago ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- 6 hrs ago ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- 9 hrs ago Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- 11 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
Don't Miss
- Movies Seetha Rama ; ಹೊಸ ಸ್ಕೆಚ್ ಹಾಕಿ ಅಂಜಲಿಯನ್ನು ಭೇಟಿ ಮಾಡಿದ ರುದ್ರಪ್ರತಾಪ್ ಮಾಡಿದ್ದೇನು..?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲಂಗಾಣ ಸ್ಟೈಲ್ ರೆಸ್ಟೋರೆಂಟ್
ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ, ಮುಖ್ಯವಾಗಿ ಬೆಂಗಳೂರಿನಲ್ಲಿ ಆಂಧ್ರ ಸ್ಟೈಲ್ ಫುಡ್, ಆಂಧ್ರ ಸ್ಟೈಲ್ ರೆಸ್ಟೋರೆಂಟು ಮತ್ತು ಹೋಟೆಲುಗಳಿವೆ. ಇಲ್ಲಿ ವಿಶೇಷವಾಗಿ ನಂದಿನಿ ಹೋಟೆಲುಗಳ ಸಮೂಹನ್ನು ಹೆಸರಿಸಬಹುದಾಗಿದೆ. ಬಾಳೆ ಎಲೆ ಮೇಲೆ ಫುಲ್ ಮೀಲ್ಸ್ ಸಸ್ಯಾಹಾರ ಮತ್ತು ಮಾಂಸಾಹಾರದ ರುಚಿಗಳನ್ನು ಬಡಿಸುವ ಪದ್ದತಿ ಆರಂಭಿಸಿದ್ದು ಇವೇ ಹೋಟೆಲುಗಳು.
ಈ ಹೋಟೆಲುಗಳು ಮೊದಮೊದಲು ಜನತೆಯನ್ನು ಆಕರ್ಷಿಸಿದರೂ ಈಚೆಗೆ ಅರ್ಧ ಬೆಂದ ಅನ್ನ ಮತ್ತು ಚಪ್ಪೆಚಪ್ಪೆ ಬಿರಿಯಾನಿ ಊಟ ಹಾಕುತ್ತಿರುವುದರಿಂದ ಜನ ಬೇಸತ್ತಿದ್ದಾರೆ. ಸದ್ಯಕ್ಕೆ ವಿಷಯ ಅದಲ್ಲ. ಪ್ರತ್ಯೇಕ ತೆಲಂಗಾಣ ರಾಜ್ಯ ವಿದ್ಯುಕ್ತವಾಗಿ ಅನಾವರಣಗೊಂಡರೆ ಬೆಂಗಳೂರಿನಲ್ಲಿ ತೆಲಂಗಾಣ ಹೋಟೆಲುಗಳು ಕಾಣಿಸುಕೊಳ್ಳುತ್ತವೆಯೇ ಎಂಬುದು ನಮ್ಮ ಕುತೂಹಲ. ಹಾಗೊಮ್ಮೆ ತೆಲಂಗಾಣ ರೆಸ್ಟೋರೆಂಟುಗಳು ಆರಂಭಗೊಂಡರೆ ಆಂಧ್ರ ಸ್ಟ್ಯೈಲ್ ಹೋಟೆಲುಗಳಿಗೆ ಸಖತ್ ಕಾಂಪಿಟಿಷನ್ ಒಡ್ಡುವುದು ಖಂಡಿತ.
ಕುತೂಹಲ ತಣಿಸಿಕೊಳ್ಳಲು ನಮ್ಮ ದಟ್ಸ್ ತೆಲುಗು ಡಾಟ್ ಕಾಂನ ಸಂಪಾದಕ ಶಾಂತಾರಾಂ ಅವರನ್ನು ಸಂಪರ್ಕಿಸಲಾಯಿತು. ಈ ಬಗ್ಗೆ ಅಧಿಕೃತವಾಗಿ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಅವರು ಕೈಚೆಲ್ಲಿದ್ದಾರೆ. ಇಂದು ಬೆಳಗಿನ ಜಾವವಷ್ಟೇ ಚಂದ್ರಶೇಖರರಾವ್ ಅವರು ಎಳನೀರು ಬ್ರೇಕ್ ಫಾಸ್ಟ್ ಮಾಡಿದ್ದಾರೆ. ನಂತರದ ಬೆಳವಣಿಗೆಗಳನ್ನು ಆನಂತರ ಈಮೇಲಿನಲ್ಲಿ ಕಳಿಸಲಾಗುವುದು ಎಂದಷ್ಟೇ ಹೇಳಿ ಅವರು ಫೋನ್ ಅಫ್ ಮಾಡಿದರು.