Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಟೊಮೆಟೊಭಾತ್ ವಿರೋಧಿಸಿ ಪಂಜಿನ ಮೆರವಣಿಗೆ

ನಾನು ಕೆಲಸಮಾಡುವ ಕಂಪನಿ ಜಯನಗರದಲ್ಲಿದೆ. ನಾವು ಸಹೋದ್ಯೋಗಿಗಳು ಮಧ್ಯಾನ್ಹದ ಊಟಕ್ಕೆ ಬೇರೆಬೇರೆ ಹೋಟೆಲುಗಳಿಗೆ ಹೋಗುತ್ತೇವೆ. ವೀಕ್ ಎಂಡ್ ಪ್ರಯುಕ್ತ ಸೌತ್ ಎಂಡ್ ಹೋಟೆಲಿನಲ್ಲಿ ಶುಕ್ರವಾರದಂದು ದುಬಾರಿ ಊಟ ಮಾಡಿದರೆ ಸೋಮವಾರದಿಂದ ಗುರುವಾರದವರಿಗೆ ನಮಗೆ ದರ್ಶಿನಿ ಊಟವೇ ಗತಿ.
ಮಂಗಳವಾರ ಮಧ್ಯಾನ್ಹ ಜಯನಗರ ಮೂರನೇ ಬ್ಲಾಕಿನಲ್ಲಿರುವ ಉಪಾಹಾರ ದರ್ಶಿನಿಯಲ್ಲಿ ನಾನು ಮತ್ತು ನನ್ನ ಮಿತ್ರರು ಊಟಮಾಡಿದೆವು. ದಟ್ಸ್ ಕನ್ನಡ ವರದಿಗಾರರು ಅಲ್ಲಿಗೆ ಬಂದಿದ್ದರು. ಬಹುತೇಕ ಎಲ್ಲರೂ ಊಟ ಮಾಡಿದ್ದು ಟೊಮೆಟೊ ರೈಸ್ ಭಾತ್ ಮತ್ತು ಮೊಸರನ್ನ. ಎಲ್ಲರೂ ಈ ಟೊಮೆಟೊ ರೈಸ್ ಎಂಬ ಅರ್ಥಹೀನ, ಕಳಾಹೀನ, ಸ್ವಾದಹೀನ, ಮತಿಹೀನ ಪದಾರ್ಥವನ್ನು ಟೀಕಿಸುತ್ತಲೇ ಊಟ ಮಾಡಿದರು.
ಟೊಮೆಟೊ ಭಾತ್ ಕೇವಲ UD ಯಲ್ಲಿ ಮಾತ್ರವಲ್ಲ. ಅನಿವಾರ್ಯಕ್ಕೊ ಅಥವಾ ಆಕಸ್ಮಾತಾಗಿಯೋ ಹೊಟೆಲು ತಿಂಡಿ ಬಳಸುವವರನ್ನು ಸತತ ಕಾಡುತ್ತಿರುವ ಯಕ್ಷಪ್ರಶ್ನೆಯೆಂದರೆ ಇದನ್ನು ಯಾಕೆ ತಯಾರಿಸುತ್ತಾರೆ ಎಂದು. ಬಿಸಿಬೇಳೆ ಭಾತ್, ಚಿತ್ರಾನ್ನ, ಪೊಂಗಲ್, ಅನ್ನ ಸಾಂಬಾರು, ಪುಳಿಯೋಗರೆ, ಕಾಯಿಸಾಸುವೆ ಅನ್ನ, ವಾಂಗಿಭಾತ್ ಮುಂತಾದ ಅನ್ನ ಮೂಲದ ತಿಂಡಿಗಳು ಸ್ವೀಕಾರಾರ್ಹವೆ. ಆದರೆ, ಟೊಮೆಟೊ ಭಾತ್ ಅಂತಹ ಮಹಾಮೋಸದ ತಿಂಡಿ ಕನ್ನಡ ಜಗತ್ತಿನಲ್ಲಿ ಇನ್ನೊಂದಿಲ್ಲ.
ಟೊಮೆಟೊ ಹಣ್ಣು ಜ್ಯೂಸಿಗೋ ಅಥವಾ ಹಸಿಹಸಿಯಾಗಿ ತಿನ್ನುವುದಕ್ಕೋ ಸರಿ. ಇದನ್ನು ಬೇಯಿಸಿ, ಹುರಿದು, ತಿರುವಿ ಅನ್ನಕ್ಕೆ ಹಾಕಿ ಕಲಸುವ ಹೊತ್ತಿಗೆ ಟೊಮೆಟೊ ಹಣ್ಣು ಸತ್ತು ಸ್ವರ್ಗ ಸೇರಿರುತ್ತದೆ. ಇಂಥ ಪದಾರ್ಥವನ್ನು ಒಂದು ರೆಸಿಪಿಯಾಗಿ ಮಾಡಿ ಮಾರುವುದು ಮಹಾಮೋಸ. ಮನೆಯಲ್ಲಿ ಮಾಡಿದರೂ ಅಷ್ಟೆ. ಈ ಭಾತಿನಲ್ಲಿ ಇರುವುದೆಂದು ಆರೋಪಿಸಲಾಗಿರುವ ಹಣ್ಣಿನ ರಸ ಒಣಗಿರುತ್ತದೆ, ಸತ್ತ ಟೊಮೆಟೊದ ಕೆಂಪು ಚರ್ಮ ಚೂರುಚೂರುಗಳಾಗಿ ತಟ್ಟೆಯ ಅಲ್ಲಲ್ಲಿ ಬಿದ್ದಿರುತ್ತದೆ.
ನಮ್ಮದೇ ಆಹಾರ ಪದ್ಧತಿಗಳನ್ನು ಹೋಟೆಲ್ ಉದ್ಯಮ ಈಗಾಗಲೇ ಸಾಕಷ್ಟು ಹಾಳುಮಾಡಿರುತ್ತದೆ. ಹೀಗಿರುವಾಗ ಬದುಕಿ ಉಳಿದಿರುವ ನಮ್ಮ ಕೆಲವೇ ಕೆಲವು ತಿಂಡಿಗಳನ್ನು ತಿನ್ನುವ ಕೆಲವೇ ಕನ್ನಡಿಗರ ಆಹಾರ ಧರ್ಮದ ಮೇಲೆ ಪ್ರತಿನಿತ್ಯ ಅನಾಚಾರ, ಅತ್ಯಾಚಾರವಾಗುತ್ತಿದೆ.
ಇದರ ವಿರುದ್ಧ ನಾವು ಕನ್ನಡಿಗರು ಪ್ರತಿಭಟಿಸಬೇಕು. ಕನ್ನಡ ಎಂದಾಕ್ಷಣ ಕನ್ನಡ ಸಾಹಿತ್ಯ, ಕನ್ನಡ ಸಂಗೀತ, ಕನ್ನಡ ಸಿನಿಮಾ, ಕನ್ನಡ ಶಾಲೆ, ಕನ್ನಡ ಪತ್ರಿಕೋದ್ಯಮ ಎಂದು ಭಾವಿಸುವ ನಾವುಗಳು ಕನ್ನಡದ ಊಟದ ಬಗ್ಗೆಯೂ ಎಚ್ಚೆತ್ತುಕೊಳ್ಳುವುದು ಅಗತ್ಯ.
ನಮ್ಮವರೇ ಆಗಿರುವ ವಾಟಾಳ್ ನಾಗರಾಜ್, ಪ್ರೊ. ಜಿ. ವೆಂಕಟಸುಬ್ಬಯ್ಯ, ಸಿಪಿ ಕೃಷ್ಣಕುಮಾರ್, ಯುಆರ್ ಅನಂತಮೂರ್ತಿ, ಅರವಿಂದ ಮಾಲಗತ್ತಿ, ಡಾ. ಪುರುಷೋತ್ತಮ ಬಿಳಿಮಲೆ, ನಾಗ ಐತಾಳ, ಪ್ರಕಾಶ್ ರಾವ್ ಪಯ್ಯಾರ್, ವಾಣಿ ರಾಮದಾಸ್, ಡಾ. ಎಂಎಸ್ ನಟರಾಜ್, ನಾಗಭೂಷಣ ರಾವ್ ಮೂಲ್ಕಿ, ವಲ್ಲೀಶ ಶಾಸ್ತ್ರಿ, ಟಿ ಎ ನಾರಾಯಣ ಗೌಡ, ಜಯದೇವ ಪ್ರಸನ್ನ, ಕೈಯಾರ ಕಿಞಣ್ಣ ರೈ, ವಸುಧೇಂದ್ರ ಮುಂತಾದವರು ಸೆಟೆದು ನಿಂತು ಕೆಟ್ಟ ಕನ್ನಡ ವಿರುದ್ಧ ಪ್ರತಿಭಟನೆ ಮಾಡಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಬೇಕೆಂಬ ಬಯಕೆ ನನ್ನದು.
ಇಂಥ ಅನಿಷ್ಟಗಳ ವಿರುದ್ಧ ಹೋರಾಡುವುದರ ಮುಂದಾಳತ್ವವನ್ನು ವಾಟಾಳ್ ವಹಿಸಿಕೊಳ್ಳಲಿ ಎಂದು ನಾವು ಜೇನಾಯ್ಡ್ ಟೆಕ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಕನ್ನಡಿಗರು ಬಯಸುತ್ತೇವೆ. ಟೊಮೆಟೊ ರೈಸ್ ಭಾತ್ ವಿರುದ್ಧ ವಾಟಾಳ್ ರವರು ರಾಜ್ಯಮಟ್ಟದ ಪಂಜಿನ ಮೆರವಣಿಗೆ ಆರ್ಗನೈಜ್ ಮಾಡಿದರೆ ನಾವೆಲ್ಲ ಬಂದು ಸೇರಿಕೊಳ್ಳುತ್ತೇವೆ.



Click it and Unblock the Notifications