Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರುಚಿಯ ಅಮಲೇರಿಸುವ ಅಮಲ್ದಾರ್ ಉಪ್ಪಿಟ್ಟು

ಜತೆಯಲ್ಲಿ ಊಟಮಾಡೋಣ ಎಂದು ನಾನು ಎಷ್ಟೇ ಕೇಳಿಕೊಂಡರೂ ಅವರು ಜಪ್ಪಯ್ಯ ಎನಲಿಲ್ಲ. ಅದಕ್ಕೆ ಅವರು ಕೊಟ್ಟ ಕಾರಣಗಳು ಎರಡು. ರಾತ್ರಿ ಮನೆಯಲ್ಲಿ ಊಟ ಮಾಡದಿದ್ದರೆ ಅವರ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳು ತರಾಟೆಗೆ ತೆಗೆದುಕೊಳ್ಳುತ್ತಾರಂತೆ. ಎರಡನೆಯದು ಆಕಸ್ಮಾತ್ ಹೊರಗಡೆ ಊಟ ಮಾಡಿಬಿಡೋಣ ಎಂದರೆ ಇವತ್ತು ಅವರ ಮನಸ್ಸು ಒಪ್ಪುತ್ತಿಲ್ಲ. ಕಾರಣ, ಮನೆಯಲ್ಲಿ ವಿಶೇಷ ತಿಂಡಿ ಮಾಡಿದ್ದಾರಂತೆ. ಏನು ವಿಶೇಷ ಎಂದು ಕೇಳಲಾಗಿ ಅವರು ಹೇಳಿದ್ದು ಉಪ್ಪಿಟ್ಟು! ಅಯ್ಯೋ ದೇವರೆ, ಉಪ್ಪಿಟ್ಟು ದಿನಾ ಇದ್ದದ್ದೇ. ಅದರಲ್ಲೇನು ಸ್ಪೆಷಲ್ ಎಂದು ಕೇಳಿದಾಗ ಅವರು ಹೇಳಿದ್ದು ಹೀಗಿತ್ತು.
ಮನೆಯಲ್ಲಿ ಅವರ ಹೆಂಡತಿ ಅಪರೂಪಕ್ಕೆ ವಿಶೇಷ ಉಪ್ಪಿಟ್ಟು ಮಾಡುತ್ತಾರಂತೆ. ಅದರ ಹೆಸರು ಅಮಲ್ದಾರ್ ಉಪ್ಪಿಟ್ಟು! ಹಾಗಂದರೇನು? ನಿಮ್ಮಂತೆ ನನಗೂ ಆಶ್ಚರ್ಯವಾಯಿತು.
ನನ್ನ ಸ್ನೇಹಿತನ ಮಾವನವರು ಆಗಿನ ಕಾಲದಲ್ಲಿ ಅಮಲ್ದಾರ್ ಆಗಿದ್ದರಂತೆ. ಊರಿನ ಜನ ಅವರಿಗೆ ತುಂಬಾ ಗೌರವ ಮತ್ತು ಭಯ ಇಟ್ಟುಕೊಟ್ಟಿದ್ದರಂತೆ. ಅಮಲ್ದಾರ್ ಜಗನ್ನಾಥರಾಯರಿಗೆ ಉಪ್ಪಿಟ್ಟೆಂದರೆ ಪ್ರಾಣ. ಆದರೆ ಖಂಡಿತ ನಾವು ನೀವು ಮಾಡುವ ಉಪ್ಪಿಟ್ಟಲ್ಲ. ದಪ್ಪ ರವೆಯನ್ನು ಚೆನ್ನಾಗಿ ಹುರಿದು(over fry)ಅದಕ್ಕೆ ಯಥಾಪ್ರಕಾರ ಪದಾರ್ಥಗಳನ್ನು ಕಲೆಸಿ ಉಪ್ಪಿಟ್ಟು ಮಾಡುವುದು ಕ್ರಮ. ಆದರೆ, ಉಪ್ಪಿಟ್ಟು ತಯಾರಿಕೆಗೆ ಮನೆಯಲ್ಲೇ ತಯಾರಿಸಿದ ಬೆಣ್ಣೆಕಾಯಿಸಿದ ತುಪ್ಪವನ್ನೇ ಬಳಸಬೇಕು. ತುಪ್ಪವನ್ನು ಯಥೇಶ್ಚವಾಗಿ ಹಾಕಿ ಮಾಡಿದ ಬನ್ಸಿ ರವೆ ಉಪ್ಪಿಟ್ಟು ಸಾಮಾನ್ಯವಾಗಿ ಈಗಿನ ಕಾಲದಲ್ಲಿ ಯಾರೂ ಮಾಡುವುದಿಲ್ಲ. ಅದೂನೂವೆ ಮನೆಯಲ್ಲಿ ಕಾಯಿಸಿದ ತುಪ್ಪ. ಛೆ ಛೆ ಎಲ್ಲಾದರೂ ಉಂಟೆ ಅನ್ನಬೇಡಿ.
ನಮ್ಮ ಕಾಲೇಜು ಸೂಪರಿಂಟೆಂಡೆಂಟು ಸೋಮಶೇಖರ್ ಅವರ ಹೆಂಡತಿ ಆಗಾಗ ಅಮಲ್ದಾರ್ ಉಪ್ಪಿಟ್ಟು ತಯಾರಿಸುತ್ತಾರೆ. ಹಾಲು ಕಾಯಿಸಿದ ಕೆನೆಯನ್ನು ನಿತ್ಯ ಜೋಪಾನವಾಗಿ ತೆಗೆದಿಟ್ಟು ಒಂದು ಭಾನುವಾರ ಬೆಣ್ಣೆ ಕಡೆದು ತುಪ್ಪಕಾಯಿಸಿ ಅಮಲ್ದಾರ್ ಉಪ್ಪಿಟ್ಟು ಮಾಡುವುದು ಅವರ ಮನೆಯ ಸ್ಪೆಷಲ್. ಹಾಗಾಗಿ ಸೋಮಣ್ಣನವರು ನಮ್ಮ ಜತೆ ಹೋಟೆಲ್ ಊಟ ಮಾಡಲಿಲ್ಲವೆನ್ನಿ. ಇನ್ನೊಂದು ಅಂಶವೆಂದರೆ, ಅಮಲ್ದಾರ್ ಜಗನ್ನಾಥರಾಯರು ಆಗಾಗ ತುಪ್ಪದ ಗುಣಮಟ್ಟದ ಬಗೆಗೆ ತಮ್ಮದೇ ಆದ ವ್ಯಾಖ್ಯೆ ಕೊಡುತ್ತಿದ್ದರಂತೆ. ಅವರ ಪ್ರಕಾರ, ಮನೆಯಲ್ಲಿ ಮಾಡಿದ ಗಟ್ಟಿಯಾದ ತುಪ್ಪವನ್ನು ಒಂದು ಚಮಚ ಅಂಗೈಮೇಲೆ ಹಾಕಿದರೆ ಅದು ದೇಹದ ಶಾಖಕ್ಕೆ ಕರಗುತ್ತದಂತೆ. ಹಾಗೆ ಕರಗಿದರೆ ಒಳ್ಳೆ ತುಪ್ಪ ಇಲ್ಲದಿದ್ದರೆ ಅದರಲ್ಲೇನೋ ದೋಷವಿದೆ.
ಊರಿಗೆ ವಾಪಸ್ಸು ಬಂದನಂತರ ಸೋಮಣ್ಣನವರು ಹೇಳಿದ ಉಪ್ಪಿಟ್ಟಿನ ಬಗ್ಗೆ ನನ್ನ ಹೆಂಡತಿಗೂ ಹೇಳಿದೆ. ಅವಳು ನಕ್ಕಳು. ನೀನೂ ಮಾಡೆ ಎಂದೆ. ಮಾಡ್ತೀನಿ ಆದರೆ ತುಪ್ಪ ಆಕಳಹಾಲಿನದೋ, ಎಮ್ಮೆ ಹಾಲಿನದೋ ಎಂದು ಕೇಳಿದಳು. ನನಗೆ ಏನೂ ಹೇಳಲು ಗೊತ್ತಾಗದೆ ಸುಮ್ಮನಾಗಿಬಿಟ್ಟೆ.
ದೇವರೇ, ನಮ್ಮನ್ನು ಈ ಉಪ್ಪಿಟ್ಟಿನಿಂದ ಕಾಪಾಡಪ್ಪಾ...!
ಇದು ಉಪ್ಪಿಟ್ಟನ್ನು ಗೇಲಿ ಮಾಡೋರಿಗೆ ಮಾತ್ರ!
ಡಬ್ಬಲ್ ಡಿಲೈಟ್ ಉಪ್ಪಿಟ್ಟು ರೊಟ್ಟಿ ಸಾಬೂದಾಣಿ ಖಿಚಡಿ :
ಇದು ಏಕಾದಶಿ ಪರಿಹಾರ



Click it and Unblock the Notifications