Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್!
ದೇವಾನುದೇವತೆಗಳೆ ‘ತಿಂಡಿಪೋತ’ರಾಗಿರುವಾಗ... (ಭಾಗ 1)
ದೇವರ ಉದಾಹರಣೆಗಳನ್ನು ಮುಂದಿಟ್ಟರೂ, ಇಷ್ಟೆಲ್ಲ ಮನವರಿಕೆ ಮಾಡಿಕೊಟ್ಟರೂ ಕೇವಲ ನಾನೊಬ್ಬನೆ ತಿಂಡಿಪೋತ ಅಲ್ಲ ಎಂಬುದನ್ನು ನನ್ನ ಹಠಮಾರಿ ಗೆಳೆಯಗೆಳತಿಯರು ಒಪ್ಪುವುದೇ ಇಲ್ಲ. ನನ್ನ ಕರ್ಮ!
ಎಲ್ಲರಿಗೂ ಒಂದಲ್ಲ ಒಂದು ಚಟ ಇರಬೇಕಾದ್ದು ಪ್ರಕೃತಿ ನಿಯಮ. ನನಗಂತೂ ತಿಂಡಿಯನ್ನು ಮೆಲುಕು ಹಾಕುತ್ತ ಇರುವುದೆಂದರೆ ಪಂಚಪ್ರಾಣ. ಈ ಒಳ್ಳೆಯ ಚಟವನ್ನು ಸೊಟ್ಟ ದೃಷ್ಟಿಯಿಂದ ಹಿಯ್ಯಾಳಿಸುತ್ತ ‘ತಿಂಡಿಪೋತ ಹಾಯ್.. ಹಾಯ್’ ಎಂದು ಗೆಳೆಯರೆನ್ನಿಸಿಕೊಂಡಿರುವ ಪಾಪಿಗಳು ಗೇಲಿ ಮಾಡುತ್ತಾರೆ.
ಇಡೀ ಪ್ರಪಂಚದಲ್ಲಿ ನಾನೊಬ್ಬನೇ ತಿಂಡಿಪೋತನೇ? ಬೇರೆ ಯಾರೂ ಈ ಹೆಗ್ಗಳಿಕೆಗೆ ಪಾಲುದಾರರು ಇಲ್ಲವೇ? ‘ದೇವಾನಂ ತಿಂಡಿ ಪ್ರಿಯಂಃ’ ಎಂಬ ಉಕ್ತಿ ಇವರ ಗಮನಕ್ಕೆ ಏಕೆ ಬರುವುದಿಲ್ಲ ಎಂದು ಸಂಕಟವಾಗುತ್ತದೆ ಹಾಗೂ ಈ ತಿಂಡಿ ಪಕ್ಷಪಾತಿಗಳ ಮೇಲೆ ಕಡುಕೋಪ ಬರುತ್ತೆ!
ಪುಟ್ಟ ಬಾಲಕೃಷ್ಣನ ಉದಾಹರಣೆ ತೆಗೆದುಕೊಳ್ಳಿ. ಅವನ ಜನ್ಮದಿನ, ಎಲ್ಲರೂ ಅದೆಷ್ಟು ವಿವಿಧ ತಿಂಡಿ ತಿನಿಸುಗ
ಳನ್ನು ನಿಷ್ಠೆಯಿಂದ ತಯಾರಿಸಿ ಭಕ್ತಿಪೂರ್ವಕವಾಗಿ ನೈವೇದ್ಯ ಮಾಡುತ್ತಾರೆ. ಚಕ್ಕುಲಿ, ತೆಂಗೊಳಲು, ಬೆಣ್ಣೆ ಮುರುಕು, ಕೋಡುಬಳೆ.. ಅಬ್ಬಬ್ಬ...ನಿಪ್ಪಟ್ಟು, ಹಪ್ಪಳ, ಸಂಡಿಗೆ, ಬೇಸಿನ್ ಉಂಡೆ.. ಛೇ ಯಾಕೆ ಇದನ್ನೆಲ್ಲ ಜ್ಞಾಪಿಸಿಕೊಂಡು ಬಾಯಿಯಲ್ಲಿ ನೀರು ತರಿಸಿಕೊಳ್ಳುವುದು.ಆಹಾ ! ಸತ್ಯನಾರಾಯಣನಿಗಂತೂ ಬೆಣ್ಣೆ ಕಾಯಿಸಿದ ತುಪ್ಪ, ಸಕ್ಕರೆ, ಬಾಳೆಹಣ್ಣು, ಪಚ್ಚ ಕರ್ಪೂರ, ಧಂಡಿಯಾಗಿ ದ್ರಾಕ್ಷಿ, ಗೋಡಂಬಿ, ರವೆಯ ಮಿಶ್ರಣದಿಂದ ತಯಾರಿಸಿದ ‘ಸಪಾದ ಭಕ್ಷ್ಯ’. ಈ ಪ್ರಸಾದ ತಿಂದ ಮೇಲೆ ಜಿಡ್ಡಿನ ಕೈಯನ್ನು ಸೀಗೆಪುಡಿಯಿಂದಲೇ ತೊಳೆದುಕೊಳ್ಳಬೇಕು. ಡೆಟಾಲ್ ಲಿಕ್ವಿಡ್ ಸೋಪು ಮಡಿಗೆ ಬರಲ್ಲ.
ತಿರುಪತಿ ತಿಮ್ಮಪ್ಪನಿಗೆ ಹಲ್ಲು ನೋವಿರಬಹುದೇನೋ ಎಂದು ನನಗೆ ಅನುಮಾನ. ಅವನಿಗೆ ಬಲು ಇಷ್ಟವಾಗಿರುವ, ಮೆತ್ತಗಿರುವ, ಘಮಘಮವೆನಿಸುವ ಲಾಡು ಉಂಡೆ- ಅದರಲ್ಲಿ ಒಂಬತ್ತು ಅಂಶ ಉತ್ತುತ್ತೆ, ಗೋಡಂಬಿ, ದ್ರಾಕ್ಷಿ, ಪಚ್ಚ ಕರ್ಪೂರ, ಜೇನು ತುಪ್ಪ, ಲವಂಗ ಮತ್ತು ಒಂದಂಶ ಲಾಡು ಕಾಳಿನ ಮಿಶ್ರಣದ ಉಂಡೆ. ಇನ್ನು ವಡೆ- ಅಯ್ಯಮ್ಮ ಇದನ್ನು ಪುಡಿ ಮಾಡಬೇಕಾದರೆ ಹಲ್ಲು ಪ್ರಯೋಜನಕ್ಕೆ ಬಾರದು. ಏನಿದ್ದರೂ ಎರಡಾದರೂ ಕಬ್ಬಿಣದ ಸುತ್ತಿಗೆ ಬೇಕು! ಈ ಕಟಕಲು ವಡೆಯನ್ನು ಭಕ್ತರಿಗೆ ದಾಟಿಸಿ, ತಾನು ಮಾತ್ರ ಲಘುವಾದ ಘಮ್ಮೆನಿಸುವ ಲಾಡು ಉಂಡೆಯ ರುಚಿಯನ್ನು ಆಸ್ವಾದಿಸುತ್ತಿದ್ದಾನೆ ಈ ನಮ್ಮ ತಿಮ್ಮಪ್ಪ !
ಇನ್ನು ಬುಸ್ಸ್ ನಾಗಪ್ಪ- ಅದೇ ಸುಬ್ರಹ್ಮಣ್ಯನಿಗೆ ಹದವಾಗಿ ಘಮ್ಮೆನಿಸುವ ಚಿಗುಳಿ, ತಂಬಿಟ್ಟು ಜೊತೆಗೆ ದಪ್ಪ ಕೆನೆಗಟ್ಟುವಂತೆ ಕಾಯಿಸಿದ ಹಾಲು- ಏನುಂಟು ಏನಿಲ್ಲ - ಇವುಗಳ ನಿವೇದನೆ. ಇತ್ತೀಚಿನ ಕೆಲವು ಕ್ರಾಂತಿಕಾರಿ ವಿಚಾರವಾದಿಗಳು ಹಾಲನ್ನು ಕೇವಲ ಬಡವರಿಗೆ ಮಾತ್ರ ಮೀಸಲಿಡಿ ಎಂಬ ಕೂಗಿನೊಂದಿಗೆ ನಾಗರಗಳಿಗೆ ಕೇವಲ ಮೊಟ್ಟೆಯನ್ನು ಮಾತ್ರ ನಿವೇದಿಸತಕ್ಕದ್ದೆಂದು ಆದೇಶ ಹೊರಡಿಸಿಬಿಟ್ಟಿದ್ದಾರಂತೆ.



Click it and Unblock the Notifications