Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications











