Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications











