Latest Updates
-
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್
ಓಣಂ ಸ್ಪೆಷೆಲ್ ಅಡುಗೆ-ಕೂಟುಕರಿ

ಬೇಕಾಗುವ ಸಾಮಾಗ್ರಿಗಳು:
ಕಡಲೆ 1/2 ಕಪ್
ತರಕಾರಿ ಒಂದು ಕಪ್
ತೆಂಗಿನ ತುರಿ 2 ಕಪ್
ಕೊತ್ತಂಬರಿ ಪುಡಿ ಒಂದು ಚಮಚ
ಮೆಂತೆ 1/4 ಚಮಚ
ಒಣ ಕೆಂಪು ಮೆಣಸು 5-6
ಸಾಸಿವೆ 1/4 ಚಮಚ
ಅರಿಶಿಣ ಪುಡಿ ಅರ್ಧ ಚಮಚ
ಜೀರಿಗೆ 1/4ಚಮಚ
ಕರಿಬೇವಿನ ಎಲೆ
ರುಚಿಗೆ ತಕ್ಕ ಉಪ್ಪು
ಎಣ್ಣೆ
ತಯಾರಿಸುವ ವಿಧಾನ:
1. ಕಡಲೆಯನ್ನು ನೀರಿನಲ್ಲಿ ಒಂದು ರಾತ್ರಿ ನೆನೆ ಹಾಕಬೇಕು.
2. ನಂತರ ಕಡಲೆ ಮತ್ತು ತರಕಾರಿಗಳನ್ನು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು.
3. ಒಂದು ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ತೆಂಗಿನ ಕಾಯಿ ತುರಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅದು ಕಂದು ಬಣ್ಣ ಬರುವಾಗ ಒಂದು ಪಾತ್ರೆಯಲ್ಲಿ ಹಾಕಿಡಬೇಕು.
4. ನಂತರ ಅದೇ ಬಾಣಲೆಯಲ್ಲಿ ಕೊತ್ತಂಬರಿ ಪುಡಿ, ಮೆಂತೆ, ಒಣ ಕೆಂಪು ಮೆಣಸು, ಅರಿಶಿಣ ಪುಡಿ, ಜೀರಿಗೆ ಹಾಕಿ ಹುರಿಯಬೇಕು. ನಂತರ ಹುರಿದ ತೆಂಗಿನ ಕಾಯಿ ತುರಿ ಮತ್ತು ಮಸಾಲೆ ಮಿಶ್ರಣಕ್ಕೆ ಸ್ವಲ್ಪ ಕಾಳು ಮೆಣಸಿನ ಪುಡಿ ಹಾಕಿ ನುಣ್ಣನೆ ಅರೆಯಬೇಕು.
5. ನಂತರ ಅರೆದ ಮಸಾಲೆ ಪದಾರ್ಥವನ್ನು ಬೇಯಿಸಿದ ತರಕಾರಿ ಜೊತೆ ಹಾಕಿ ಮಿಶ್ರಣ ಮಾಡಿ, ರುಚಿಗೆ ತಕ್ಕ ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಬೇಕು( ಮಿಶ್ರಣ ಗಟ್ಟಿಯಾಗಿರಬೇಕು).
6. ಈಗ ಒಗ್ಗರಣೆ ಪಾತ್ರೆಯನ್ನು ಬಿಸಿ ಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಮತ್ತು ಕರಿಬೇವಿನ ಎಲೆ ಹಾಕಿ ಒಗ್ಗರಣೆಯನ್ನು ಕೂಟು ಕರಿಗೆ ಹಾಕಿದರೆ ಸವೆಯಲು ರುಚಿಕರವಾದ ಕೂಟು ಕರಿ ರೆಡಿ.



Click it and Unblock the Notifications