Latest Updates
-
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]



Click it and Unblock the Notifications