Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]



Click it and Unblock the Notifications











