Latest Updates
-
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು!
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]



Click it and Unblock the Notifications