Just In
- 1 hr ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 4 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 13 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 14 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Automobiles Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ
ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]