Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]



Click it and Unblock the Notifications