Latest Updates
-
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]



Click it and Unblock the Notifications











