Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
ಕೆನಡಾದಲ್ಲಿ ಸದಾನಂದ ಮಯ್ಯ ಪ್ರಬಂಧ ಮಂಡನೆ

ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಎಂ.ಟಿ.ಆರ್ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಗೊಳಿಸಿದವರು ಕನ್ನಡಿಗ ಸದಾನಂದ ಮಯ್ಯ. ಈ ವಿಚಾರ ಸಂಕಿರಣದಲ್ಲಿ ಅವರು 'ಫುಡ್ ಪ್ಯಾಕೇಜಿಂಗ್ ನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ'ಯ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದಲ್ಲಿ ಮಾಡಿರುವ ಸಂಚಲನ ಹಾಗೂ ಆಹಾರದ ಸುರಕ್ಷತೆಯ ದೃಷ್ಟಿಯಿಂದ ಈ ತಂತ್ರಜ್ಞಾನದ ಉಪಯುಕ್ತತೆ ಕುರಿತಂತೆ ಅವರು ತಮ್ಮ ಪ್ರಬಂಧದಲ್ಲಿ ಚರ್ಚಿಸಲಿದ್ದಾರೆ.
ಆಹಾರ ಉದ್ಯಮ ವಿಶ್ವದ ಅತ್ಯಂತ ಪ್ರಮುಖ ಉತ್ಪಾದನಾ ಉದ್ಯಮವಾಗಿದ್ದು, ವಾರ್ಷಿಕ 4 ಟ್ರಿಲಿಯನ್ ಯು.ಎಸ್. ಡಾಲರ್ಗಳ ವಹಿವಾಟು ನಡೆಸುತ್ತಿದೆ. ಆಹಾರ ಸಂಸ್ಕರಣೆ ಹಾಗೂ ಸಂರಕ್ಷಣೆ ಆಹಾರ ಉದ್ಯಮದ ಪ್ರಮುಖ ಭಾಗಗಳಾಗಿದ್ದು, ಇವುಗಳ ಸರಿಯಾದ ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ನ್ಯಾನೋ ತಂತ್ರಜ್ಞಾನದ ಅಳವಡಿಕೆ ಆಹಾರ ಉದ್ಯಮದ ಕ್ಷಮತೆಯನ್ನು ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಬಲ್ಲದು.
ಕೆಲವು ಜೈವಿಕವಾಗಿ ಕ್ರಿಯಾಶೀಲವಾಗಿರುವ ಆಹಾರ ಪದಾರ್ಥಗಳನ್ನು ನಮ್ಮ ದೇಹ ಸುಲಭವಾಗಿ ಹೀರಿಕೊಳ್ಳಲು ಆಗುವುದಿಲ್ಲ. ನ್ಯಾನೋ ವಸ್ತುಗಳನ್ನು ಅಳವಡಿಸಿದಾಗ, ಹೀರುವಿಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಬಹುದು. ಪ್ರಪಂಚದ ಪ್ರತಿಷ್ಠಿತ ಸಂಶೋಧನ ಕೇಂದ್ರಗಳು ಈ ನಿಟ್ಟಿನಲ್ಲಿ ವ್ಯಾಪಕವಾಗಿ ಸಂಶೋಧನೆಯನ್ನು ನಡೆಸುತ್ತಿವೆ. ಆಹಾರ ಸಂರಕ್ಷಣೆ ಅತ್ಯಂತ ಅವಶ್ಯಕವಾಗಿರುವ ಈ ದಿನಗಳಲ್ಲಿ ಆ ಕುರಿತ ಸಂಶೋಧನೆ ಪ್ರತಿ ಹಂತದಲ್ಲಿಯೂ ಸ್ವಾಗತಾರ್ಹ. ಭಾರತದ ಅನೇಕ ಪ್ರತಿಷ್ಠಿತ ಉದ್ಯಮಿಗಳು ಈ ದಿಶೆಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಅಭಿನಂದನೆಗೆ ಭಾಜನರಾಗಿದ್ದಾರೆ. ಡಾ|| ಪಿ. ಸದಾನಂದ ಮಯ್ಯರವರು ಈ ಉದ್ಯಮಿಗಳ ಸಾಲಿನಲ್ಲಿ ಅಗ್ರ ಗಣ್ಯರಾಗಿದ್ದಾರೆ. [ ಸದಾನಂದ ಮಯ್ಯ ]



Click it and Unblock the Notifications
