Latest Updates
-
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ
ಪಿತೃ ಪಕ್ಷದಂದು ಮಾಡಬಹುದಾದ ಅಡುಗೆಗಳು
ಇವತ್ತು ಮಹಾಲಯ ಅಮಾವಾಸ್ಯೆ. ಹಿಂದೂ ಧರ್ಮದಲ್ಲಿ ಸ್ವರ್ಗಸ್ಥರಾದ ಹಿರಿಯರನ್ನು ನೆನೆಯಲು ಮಹಾಲಯ ಅಮಾವಾಸ್ಯೆಸಕಾಲ. ಇತರ ದಿನಗಳಲ್ಲಿ ಹಿರಿಯರು ಸತ್ತ ದಿನದಂದು ಶ್ರಾದ್ಧ ಮಾಡಿದ್ದರೂ, ಮಹಾಲಯ ಅಮಾವಾಸ್ಯೆಯಂದು ಶ್ರಾದ್ಧ ಮಾಡಿ ದಾನ ಧರ್ಮ ಮಾಡಿದರೆ ಅವರ ಆತ್ಮಕ್ಕೆ ಶಾಂತಿ ದೊರೆಯುತ್ತದೆಂದು ಪ್ರತೀತಿ. ಯಾವುದೇ ಜಾತಿಭೇದವಿಲ್ಲದೇ ಎಲ್ಲರೂ ತಮ್ಮ ಗತಿಸಿದ ಹಿರಿಯರಿಗೆ ಈ ದಿನದಂದು ಶ್ರಾದ್ಧ ಮಾಡುತ್ತಾರೆ.
ಬೇರೆ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲು ಆಗದಿದ್ದಿದ್ದರೆ ಮಹಾಲಯ ಅಮಾವಾಸ್ಯೆಯಂದು ಮಾಡಿ ಬಡಬಗ್ಗರಿಗೆ ಅನ್ನಸಂತರ್ಪಣೆ ಮತ್ತು ದಾನಗಳನ್ನು ಮಾಡಬಹುದು. ಈ ದಿನದಂದು ಸ್ವರ್ಗಸ್ಥರಾದ ಪಿತೃದೇವತೆಗಳು ಪರಲೋಕದಿಂದ ಇಹಲೋಕಕ್ಕೆ ತಮ್ಮ ವಂಶಸ್ಥರ ಮನೆಗಳಿಗೆ ಬರುತ್ತಾರೆಂಬ ನಂಬಿಕೆಯಿದೆ.
ಈ ದಿನ ಶ್ರಾದ್ಧ ಮಾಡುವವರು ಹಬ್ಬದ ಅಡುಗೆಗಳನ್ನು ತಯಾರಿಸುತ್ತಾರೆ. ಆದರೆ ಈರುಳ್ಳಿ, ಬೆಳ್ಳುಳ್ಳಿ ಹಾಕದ ಅಡುಗೆಗಳನ್ನು ಮಾಡಲಾಗುವುದು. ಅದಲ್ಲದೆ ಉದ್ದಿನ ವಡೆ, ಪಾಯಸ ಹಾಗೂ ತಮ್ಮ ಹಿರಿಯರಿಗೆ ಇಷ್ಟವಾದ ಖಾದ್ಯಗಳನ್ನು ತಯಾರಿಸುತ್ತಾರೆ. ಸಾಮಾನ್ಯವಾಗಿ ಈ ಅಡುಗೆಗಳನ್ನು ತಾಮ್ರದ ಪಾತ್ರೆಯಲ್ಲಿ ಮಾಡಿ, ಬಾಳೆ ಎಲೆಯಲ್ಲಿ ಬಡಿಸಲಾಗುವುದು.
ಇಲ್ಲಿ ನಾವು ಈ ದಿನ ಸುಲಭದಲ್ಲಿ ತಯಾರಿಸಬಹುದಾದ ಕೆಲವೊಂದು ರೆಸಿಪಿ ನೀಡಿದ್ದೇವೆ ನೋಡಿ:

ಉದ್ದಿನ ವಡೆ
ಉದ್ದಿನವಡೆ ಮಾಡುವುದಕ್ಕೆ ಜಾಸ್ತಿ ಪದಾರ್ಥಗಳ ಅವಶ್ಯಕತೆಯಿಲ್ಲ. ಸ್ವಲ್ಪ ಸಮಯ ಜಾಸ್ತಿ ಇದ್ದರೆ ವಡೆ ಮಾಡುವುದು ಬ್ರಹ್ಮವಿದ್ಯೆ ಅಲ್ಲ. ಒಟ್ಟು ಏಳು ಐಟಂ ಬೇಕು. ಇಷ್ಟು ಇದ್ದರೆ ಸವಿರುಚಿಯ ಉದ್ದಿನ ವಡೆ ರೆಡಿ.

ಸೌತೆಕಾಯಿ ಸಾರು
ಸಾಮಾನ್ಯವಾಗಿ ಈ ದಿನ ಈರುಳ್ಳಿ ಹಾಕದ ರೆಸಿಪಿಗಳನ್ನು ಮಾಡಲಾಗುವುದು. ಈರುಳ್ಳಿ ಹಾಕದೆ ಸೌತೆಕಾಯಿ ಸಾರು ಮಾಡುವ ರೆಸಿಪಿ ನೋಡಿ ಇಲ್ಲಿದೆ.

ಮಿಶ್ರ ಸೊಪ್ಪಿನ ಗ್ರೇವಿ
ಈರುಳ್ಳಿ ಹಾಕದೆ ಮಿಶ್ರ ಸೊಪ್ಪಿನ ಗ್ರೇವಿ ಮಾಡುವ ವಿಧಾನವನ್ನು ಇಲ್ಲಿ ಹೇಳಲಾಗಿದೆ ನೋಡಿ.

ಆಲೂಜೀರಾ ಡ್ರೈ
ಈರುಳ್ಳಿ ಹಾಕದೆ ಮಾಡುವ ಆಲೂ ಜೀರಾ ಪಲ್ಯದ ರೆಸಿಪಿ ನೋಡಿ ಇಲ್ಲಿದೆ.

ಅವಲಕ್ಕಿ ಪಾಯಸ
ಈ ದಿನ ಶ್ರಾದ್ಧಕ್ಕೆ ಪಾಯಸ ತಪ್ಪದೇ ಇರುತ್ತದೆ. ಸಾಮಾನ್ಯವಾಗಿ ಖೀರ್ ಪಾಯಸ ಮಾಡಲಾಗುವುದು, ಬೇಕಾದರೆ ಈ ಅವಲಕ್ಕಿ ಪಾಯಸ ಬೇಕಾದರೆ ಟ್ರೈ ಮಾಡಹುದು.

ಸಿಹಿ ಕುಂಬಳಕಾಯಿ ಪಾಯಸ
ಈ ದಿನದ ಅಡುಗೆಯಲ್ಲಿ ಸಿಹಿ ಕುಂಬಳಕಾಯಿಂದ ಮಾಡಿದ ಖಾದ್ಯ ಕಡ್ಡಾಯ. ನೀವು ಬೇಕಾದರೆ ಸಿಹಿ ಕುಂಬಳಕಾಯಿಯ ಪಾಯಸ ಬೇಕಾದರೂ ಮಾಡಬಹುದು.



Click it and Unblock the Notifications











