Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಪಿತೃ ಪಕ್ಷದಂದು ಮಾಡಬಹುದಾದ ಅಡುಗೆಗಳು
ಇವತ್ತು ಮಹಾಲಯ ಅಮಾವಾಸ್ಯೆ. ಹಿಂದೂ ಧರ್ಮದಲ್ಲಿ ಸ್ವರ್ಗಸ್ಥರಾದ ಹಿರಿಯರನ್ನು ನೆನೆಯಲು ಮಹಾಲಯ ಅಮಾವಾಸ್ಯೆಸಕಾಲ. ಇತರ ದಿನಗಳಲ್ಲಿ ಹಿರಿಯರು ಸತ್ತ ದಿನದಂದು ಶ್ರಾದ್ಧ ಮಾಡಿದ್ದರೂ, ಮಹಾಲಯ ಅಮಾವಾಸ್ಯೆಯಂದು ಶ್ರಾದ್ಧ ಮಾಡಿ ದಾನ ಧರ್ಮ ಮಾಡಿದರೆ ಅವರ ಆತ್ಮಕ್ಕೆ ಶಾಂತಿ ದೊರೆಯುತ್ತದೆಂದು ಪ್ರತೀತಿ. ಯಾವುದೇ ಜಾತಿಭೇದವಿಲ್ಲದೇ ಎಲ್ಲರೂ ತಮ್ಮ ಗತಿಸಿದ ಹಿರಿಯರಿಗೆ ಈ ದಿನದಂದು ಶ್ರಾದ್ಧ ಮಾಡುತ್ತಾರೆ.
ಬೇರೆ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲು ಆಗದಿದ್ದಿದ್ದರೆ ಮಹಾಲಯ ಅಮಾವಾಸ್ಯೆಯಂದು ಮಾಡಿ ಬಡಬಗ್ಗರಿಗೆ ಅನ್ನಸಂತರ್ಪಣೆ ಮತ್ತು ದಾನಗಳನ್ನು ಮಾಡಬಹುದು. ಈ ದಿನದಂದು ಸ್ವರ್ಗಸ್ಥರಾದ ಪಿತೃದೇವತೆಗಳು ಪರಲೋಕದಿಂದ ಇಹಲೋಕಕ್ಕೆ ತಮ್ಮ ವಂಶಸ್ಥರ ಮನೆಗಳಿಗೆ ಬರುತ್ತಾರೆಂಬ ನಂಬಿಕೆಯಿದೆ.
ಈ ದಿನ ಶ್ರಾದ್ಧ ಮಾಡುವವರು ಹಬ್ಬದ ಅಡುಗೆಗಳನ್ನು ತಯಾರಿಸುತ್ತಾರೆ. ಆದರೆ ಈರುಳ್ಳಿ, ಬೆಳ್ಳುಳ್ಳಿ ಹಾಕದ ಅಡುಗೆಗಳನ್ನು ಮಾಡಲಾಗುವುದು. ಅದಲ್ಲದೆ ಉದ್ದಿನ ವಡೆ, ಪಾಯಸ ಹಾಗೂ ತಮ್ಮ ಹಿರಿಯರಿಗೆ ಇಷ್ಟವಾದ ಖಾದ್ಯಗಳನ್ನು ತಯಾರಿಸುತ್ತಾರೆ. ಸಾಮಾನ್ಯವಾಗಿ ಈ ಅಡುಗೆಗಳನ್ನು ತಾಮ್ರದ ಪಾತ್ರೆಯಲ್ಲಿ ಮಾಡಿ, ಬಾಳೆ ಎಲೆಯಲ್ಲಿ ಬಡಿಸಲಾಗುವುದು.
ಇಲ್ಲಿ ನಾವು ಈ ದಿನ ಸುಲಭದಲ್ಲಿ ತಯಾರಿಸಬಹುದಾದ ಕೆಲವೊಂದು ರೆಸಿಪಿ ನೀಡಿದ್ದೇವೆ ನೋಡಿ:

ಉದ್ದಿನ ವಡೆ
ಉದ್ದಿನವಡೆ ಮಾಡುವುದಕ್ಕೆ ಜಾಸ್ತಿ ಪದಾರ್ಥಗಳ ಅವಶ್ಯಕತೆಯಿಲ್ಲ. ಸ್ವಲ್ಪ ಸಮಯ ಜಾಸ್ತಿ ಇದ್ದರೆ ವಡೆ ಮಾಡುವುದು ಬ್ರಹ್ಮವಿದ್ಯೆ ಅಲ್ಲ. ಒಟ್ಟು ಏಳು ಐಟಂ ಬೇಕು. ಇಷ್ಟು ಇದ್ದರೆ ಸವಿರುಚಿಯ ಉದ್ದಿನ ವಡೆ ರೆಡಿ.

ಸೌತೆಕಾಯಿ ಸಾರು
ಸಾಮಾನ್ಯವಾಗಿ ಈ ದಿನ ಈರುಳ್ಳಿ ಹಾಕದ ರೆಸಿಪಿಗಳನ್ನು ಮಾಡಲಾಗುವುದು. ಈರುಳ್ಳಿ ಹಾಕದೆ ಸೌತೆಕಾಯಿ ಸಾರು ಮಾಡುವ ರೆಸಿಪಿ ನೋಡಿ ಇಲ್ಲಿದೆ.

ಮಿಶ್ರ ಸೊಪ್ಪಿನ ಗ್ರೇವಿ
ಈರುಳ್ಳಿ ಹಾಕದೆ ಮಿಶ್ರ ಸೊಪ್ಪಿನ ಗ್ರೇವಿ ಮಾಡುವ ವಿಧಾನವನ್ನು ಇಲ್ಲಿ ಹೇಳಲಾಗಿದೆ ನೋಡಿ.

ಆಲೂಜೀರಾ ಡ್ರೈ
ಈರುಳ್ಳಿ ಹಾಕದೆ ಮಾಡುವ ಆಲೂ ಜೀರಾ ಪಲ್ಯದ ರೆಸಿಪಿ ನೋಡಿ ಇಲ್ಲಿದೆ.

ಅವಲಕ್ಕಿ ಪಾಯಸ
ಈ ದಿನ ಶ್ರಾದ್ಧಕ್ಕೆ ಪಾಯಸ ತಪ್ಪದೇ ಇರುತ್ತದೆ. ಸಾಮಾನ್ಯವಾಗಿ ಖೀರ್ ಪಾಯಸ ಮಾಡಲಾಗುವುದು, ಬೇಕಾದರೆ ಈ ಅವಲಕ್ಕಿ ಪಾಯಸ ಬೇಕಾದರೆ ಟ್ರೈ ಮಾಡಹುದು.

ಸಿಹಿ ಕುಂಬಳಕಾಯಿ ಪಾಯಸ
ಈ ದಿನದ ಅಡುಗೆಯಲ್ಲಿ ಸಿಹಿ ಕುಂಬಳಕಾಯಿಂದ ಮಾಡಿದ ಖಾದ್ಯ ಕಡ್ಡಾಯ. ನೀವು ಬೇಕಾದರೆ ಸಿಹಿ ಕುಂಬಳಕಾಯಿಯ ಪಾಯಸ ಬೇಕಾದರೂ ಮಾಡಬಹುದು.



Click it and Unblock the Notifications