Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಪಿತೃ ಪಕ್ಷದಂದು ಮಾಡಬಹುದಾದ ಅಡುಗೆಗಳು
ಇವತ್ತು ಮಹಾಲಯ ಅಮಾವಾಸ್ಯೆ. ಹಿಂದೂ ಧರ್ಮದಲ್ಲಿ ಸ್ವರ್ಗಸ್ಥರಾದ ಹಿರಿಯರನ್ನು ನೆನೆಯಲು ಮಹಾಲಯ ಅಮಾವಾಸ್ಯೆಸಕಾಲ. ಇತರ ದಿನಗಳಲ್ಲಿ ಹಿರಿಯರು ಸತ್ತ ದಿನದಂದು ಶ್ರಾದ್ಧ ಮಾಡಿದ್ದರೂ, ಮಹಾಲಯ ಅಮಾವಾಸ್ಯೆಯಂದು ಶ್ರಾದ್ಧ ಮಾಡಿ ದಾನ ಧರ್ಮ ಮಾಡಿದರೆ ಅವರ ಆತ್ಮಕ್ಕೆ ಶಾಂತಿ ದೊರೆಯುತ್ತದೆಂದು ಪ್ರತೀತಿ. ಯಾವುದೇ ಜಾತಿಭೇದವಿಲ್ಲದೇ ಎಲ್ಲರೂ ತಮ್ಮ ಗತಿಸಿದ ಹಿರಿಯರಿಗೆ ಈ ದಿನದಂದು ಶ್ರಾದ್ಧ ಮಾಡುತ್ತಾರೆ.
ಬೇರೆ ದಿನಗಳಲ್ಲಿ ಶ್ರಾದ್ಧ ಕಾರ್ಯ ಮಾಡಲು ಆಗದಿದ್ದಿದ್ದರೆ ಮಹಾಲಯ ಅಮಾವಾಸ್ಯೆಯಂದು ಮಾಡಿ ಬಡಬಗ್ಗರಿಗೆ ಅನ್ನಸಂತರ್ಪಣೆ ಮತ್ತು ದಾನಗಳನ್ನು ಮಾಡಬಹುದು. ಈ ದಿನದಂದು ಸ್ವರ್ಗಸ್ಥರಾದ ಪಿತೃದೇವತೆಗಳು ಪರಲೋಕದಿಂದ ಇಹಲೋಕಕ್ಕೆ ತಮ್ಮ ವಂಶಸ್ಥರ ಮನೆಗಳಿಗೆ ಬರುತ್ತಾರೆಂಬ ನಂಬಿಕೆಯಿದೆ.
ಈ ದಿನ ಶ್ರಾದ್ಧ ಮಾಡುವವರು ಹಬ್ಬದ ಅಡುಗೆಗಳನ್ನು ತಯಾರಿಸುತ್ತಾರೆ. ಆದರೆ ಈರುಳ್ಳಿ, ಬೆಳ್ಳುಳ್ಳಿ ಹಾಕದ ಅಡುಗೆಗಳನ್ನು ಮಾಡಲಾಗುವುದು. ಅದಲ್ಲದೆ ಉದ್ದಿನ ವಡೆ, ಪಾಯಸ ಹಾಗೂ ತಮ್ಮ ಹಿರಿಯರಿಗೆ ಇಷ್ಟವಾದ ಖಾದ್ಯಗಳನ್ನು ತಯಾರಿಸುತ್ತಾರೆ. ಸಾಮಾನ್ಯವಾಗಿ ಈ ಅಡುಗೆಗಳನ್ನು ತಾಮ್ರದ ಪಾತ್ರೆಯಲ್ಲಿ ಮಾಡಿ, ಬಾಳೆ ಎಲೆಯಲ್ಲಿ ಬಡಿಸಲಾಗುವುದು.
ಇಲ್ಲಿ ನಾವು ಈ ದಿನ ಸುಲಭದಲ್ಲಿ ತಯಾರಿಸಬಹುದಾದ ಕೆಲವೊಂದು ರೆಸಿಪಿ ನೀಡಿದ್ದೇವೆ ನೋಡಿ:

ಉದ್ದಿನ ವಡೆ
ಉದ್ದಿನವಡೆ ಮಾಡುವುದಕ್ಕೆ ಜಾಸ್ತಿ ಪದಾರ್ಥಗಳ ಅವಶ್ಯಕತೆಯಿಲ್ಲ. ಸ್ವಲ್ಪ ಸಮಯ ಜಾಸ್ತಿ ಇದ್ದರೆ ವಡೆ ಮಾಡುವುದು ಬ್ರಹ್ಮವಿದ್ಯೆ ಅಲ್ಲ. ಒಟ್ಟು ಏಳು ಐಟಂ ಬೇಕು. ಇಷ್ಟು ಇದ್ದರೆ ಸವಿರುಚಿಯ ಉದ್ದಿನ ವಡೆ ರೆಡಿ.

ಸೌತೆಕಾಯಿ ಸಾರು
ಸಾಮಾನ್ಯವಾಗಿ ಈ ದಿನ ಈರುಳ್ಳಿ ಹಾಕದ ರೆಸಿಪಿಗಳನ್ನು ಮಾಡಲಾಗುವುದು. ಈರುಳ್ಳಿ ಹಾಕದೆ ಸೌತೆಕಾಯಿ ಸಾರು ಮಾಡುವ ರೆಸಿಪಿ ನೋಡಿ ಇಲ್ಲಿದೆ.

ಮಿಶ್ರ ಸೊಪ್ಪಿನ ಗ್ರೇವಿ
ಈರುಳ್ಳಿ ಹಾಕದೆ ಮಿಶ್ರ ಸೊಪ್ಪಿನ ಗ್ರೇವಿ ಮಾಡುವ ವಿಧಾನವನ್ನು ಇಲ್ಲಿ ಹೇಳಲಾಗಿದೆ ನೋಡಿ.

ಆಲೂಜೀರಾ ಡ್ರೈ
ಈರುಳ್ಳಿ ಹಾಕದೆ ಮಾಡುವ ಆಲೂ ಜೀರಾ ಪಲ್ಯದ ರೆಸಿಪಿ ನೋಡಿ ಇಲ್ಲಿದೆ.

ಅವಲಕ್ಕಿ ಪಾಯಸ
ಈ ದಿನ ಶ್ರಾದ್ಧಕ್ಕೆ ಪಾಯಸ ತಪ್ಪದೇ ಇರುತ್ತದೆ. ಸಾಮಾನ್ಯವಾಗಿ ಖೀರ್ ಪಾಯಸ ಮಾಡಲಾಗುವುದು, ಬೇಕಾದರೆ ಈ ಅವಲಕ್ಕಿ ಪಾಯಸ ಬೇಕಾದರೆ ಟ್ರೈ ಮಾಡಹುದು.

ಸಿಹಿ ಕುಂಬಳಕಾಯಿ ಪಾಯಸ
ಈ ದಿನದ ಅಡುಗೆಯಲ್ಲಿ ಸಿಹಿ ಕುಂಬಳಕಾಯಿಂದ ಮಾಡಿದ ಖಾದ್ಯ ಕಡ್ಡಾಯ. ನೀವು ಬೇಕಾದರೆ ಸಿಹಿ ಕುಂಬಳಕಾಯಿಯ ಪಾಯಸ ಬೇಕಾದರೂ ಮಾಡಬಹುದು.



Click it and Unblock the Notifications