Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಡುಗೆ ,ಆರೋಗ್ಯ :ಶುಂಠಿ ಕಷಾಯವಲ್ಲ. ಸೂಪ್
ಅಡುಗೆ ಮನೆಯ ಪ್ರಮುಖ ಸಾಂಬಾರು ಪದಾರ್ಥಗಳಲ್ಲಿ ಒಂದಾದ ಶುಂಠಿ ಹಾಗೂ ಮೆಣಸು ಸೇರಿಸಿ ಗರಮಾಗರಂ ಸೂಪ್ ಮಾಡೋಣ ಬನ್ನಿ, ಸಣ್ಣ ಪುಟ್ಟ ಕಾಯಿಲೆಗಳನ್ನು ದೂರಾಗಿಸಲು ಆರೋಗ್ಯ ವೃದ್ಧಿಗಾಗಿ ಈ ಸೂಪ್ ಆಗಾಗ ಕುಡಿಯುವುದು ಒಳ್ಳೆಯದು. ನೆಗಡಿಗಂತೂ ಉತ್ತಮ ಔಷಧಿ
ಮನಸ್ವಿನಿ. ನಾರಾವಿ
ಬೇಕಾಗುವ ಪದಾರ್ಥಗಳು:
ಒಣ ಶುಂಠಿ : 1 ಅಂಗುಲದಷ್ಟು ಉದ್ದದ ತುಂಡು
ಕರಿ ಮೆಣಸು: 1ಟೀ ಚಮಚ
ಜೀರಿಗೆ : 1 ಟೀ ಚಮಚ
ಕೊತ್ತಂಬರಿ ಬೀಜ (ಧನಿಯ): 1ಟೀ ಚಮಚ
ನಿಂಬೆ ಹಣ್ಣು : 1
ರುಚಿಗೆ ತಕ್ಕಷ್ಟು ಅಡುಗೆ ಉಪ್ಪು, ಬೆಲ್ಲ
ತಯಾರಿಸುವ ವಿಧಾನ: ಒಣ ಶುಂಠಿಯನ್ನು ತುಂಡು ಮಾಡಿ. ಕರಿಮೆಣಸು, ಜೀರಿಗೆ, ಕೊತ್ತಂಬರಿ ಬೀಜ ಇವುಗಳನ್ನು ಪ್ರತ್ಯೇಕವಾಗಿ ಹುರಿದಿಟ್ಟುಕೊಳ್ಳಿ. ನಂತರ ಎಲ್ಲಾ ಮಿಶ್ರಣವನ್ನು ಚೂರ್ಣದ ಹದಕ್ಕೆ ನುಣ್ಣಗೆ ಮಾಡಿಕೊಳ್ಳಿ, ಹುರಳು ಕಲ್ಲಿನಲ್ಲಿ ಅಥವಾ ಕುಟ್ಟಾಣಿಯಲ್ಲಿ ಮಾಡಿದರೆ ಉತ್ತಮ. ಮಿಕ್ಸಿಗೆ ಹಾಕಿದರೆ ಚೂರ್ಣದ ಸ್ವರೂಪ ಹೋಗಿ ನಯವಾದ ಹಿಟ್ಟಾಗುವುದು ಖಂಡಿತ.
ನಾಲ್ಕು ಕಪ್ ನೀರನ್ನು ಒಲೆಯ ಮೇಲಿಟ್ಟು ಚೆನ್ನಾಗಿ ಕುದಿಸಿ. ನೀರು ಕುದಿಯುತ್ತಿರುವಾಗ ನಿಂಬೆರಸ, ಉಪ್ಪು, ಪುಡಿಮಾಡಿದ ಬೆಲ್ಲ ಮತ್ತು ಮೇಲೆ ತಿಳಿಸಿದ ಚೂರ್ಣ ಮಿಶ್ರಣವನ್ನು ಹಾಕಿ. ಐದು ನಿಮಿಷ ಚೆನ್ನಾಗಿ ಕುದಿದ ನಂತರ ಕೆಳಕ್ಕಿಳಿಸಿ. ಬಿಸಿಯ ಹದವರಿತು ಕುಡಿಯಿರಿ. ಅಗತ್ಯವಿದ್ದರೆ ಹಾಲು ಬೆರೆಸಿ ಕುಡಿಯಬಹುದು. ಶೀತ, ಕೆಮ್ಮು, ದೇಹಾಲಸ್ಯ ದೂರಾಗಿಸಲು ದಿನಕ್ಕೊಂದು ಕಪ್ ನಂತೆ ಮೂರು ದಿನ ಸೇವಿಸಿದರೆ ಸಾಕು.



Click it and Unblock the Notifications