Latest Updates
-
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಬಿಸಿಗಾಳಿ ಕಾಟವೇ? ಈ ತಂಪು ಪಾನೀಯಗಳೇ ನಿಮ್ಮ ರಕ್ಷಕ -
ಹಬ್ಬದ ಫ್ಯಾಷನ್: ಈ ಟಿಪ್ಸ್ ಫಾಲೋ ಮಾಡಿ ಮಿಂಚಿ! -
ಬಿಸಿಲ ಧಗೆಯಿಂದ ಪಾರಾಗಲು ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸಿ -
ಬಿಸಿಗಾಳಿ ಕಾಟ: ಮದುವೆ ಡೇಟಿಂಗ್ ಪ್ಲಾನ್ ಹಾಳಾಗದಂತೆ ತಡೆಯುವುದು ಹೇಗೆ? -
ಬಾಲ್ಕನಿ ಅಲಂಕಾರ: ಹಬ್ಬದ ಸಂಭ್ರಮಕ್ಕೆ 10 ನಿಮಿಷದ ಮ್ಯಾಜಿಕ್ -
ಬಿಸಿಲಿನ ಬೇಗೆಗೆ ಈ ಪಾನೀಯಗಳೇ ಮದ್ದು, ತಂಪಾಗಿರಿ ಹೀಗೆ! -
ಬೈಸಾಕಿ ಮತ್ತು ವಿಷು ಹಬ್ಬದ ಲುಕ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ಅಡುಗೆ ,ಆರೋಗ್ಯ :ಶುಂಠಿ ಕಷಾಯವಲ್ಲ. ಸೂಪ್
ಅಡುಗೆ ಮನೆಯ ಪ್ರಮುಖ ಸಾಂಬಾರು ಪದಾರ್ಥಗಳಲ್ಲಿ ಒಂದಾದ ಶುಂಠಿ ಹಾಗೂ ಮೆಣಸು ಸೇರಿಸಿ ಗರಮಾಗರಂ ಸೂಪ್ ಮಾಡೋಣ ಬನ್ನಿ, ಸಣ್ಣ ಪುಟ್ಟ ಕಾಯಿಲೆಗಳನ್ನು ದೂರಾಗಿಸಲು ಆರೋಗ್ಯ ವೃದ್ಧಿಗಾಗಿ ಈ ಸೂಪ್ ಆಗಾಗ ಕುಡಿಯುವುದು ಒಳ್ಳೆಯದು. ನೆಗಡಿಗಂತೂ ಉತ್ತಮ ಔಷಧಿ
ಮನಸ್ವಿನಿ. ನಾರಾವಿ
ಬೇಕಾಗುವ ಪದಾರ್ಥಗಳು:
ಒಣ ಶುಂಠಿ : 1 ಅಂಗುಲದಷ್ಟು ಉದ್ದದ ತುಂಡು
ಕರಿ ಮೆಣಸು: 1ಟೀ ಚಮಚ
ಜೀರಿಗೆ : 1 ಟೀ ಚಮಚ
ಕೊತ್ತಂಬರಿ ಬೀಜ (ಧನಿಯ): 1ಟೀ ಚಮಚ
ನಿಂಬೆ ಹಣ್ಣು : 1
ರುಚಿಗೆ ತಕ್ಕಷ್ಟು ಅಡುಗೆ ಉಪ್ಪು, ಬೆಲ್ಲ
ತಯಾರಿಸುವ ವಿಧಾನ: ಒಣ ಶುಂಠಿಯನ್ನು ತುಂಡು ಮಾಡಿ. ಕರಿಮೆಣಸು, ಜೀರಿಗೆ, ಕೊತ್ತಂಬರಿ ಬೀಜ ಇವುಗಳನ್ನು ಪ್ರತ್ಯೇಕವಾಗಿ ಹುರಿದಿಟ್ಟುಕೊಳ್ಳಿ. ನಂತರ ಎಲ್ಲಾ ಮಿಶ್ರಣವನ್ನು ಚೂರ್ಣದ ಹದಕ್ಕೆ ನುಣ್ಣಗೆ ಮಾಡಿಕೊಳ್ಳಿ, ಹುರಳು ಕಲ್ಲಿನಲ್ಲಿ ಅಥವಾ ಕುಟ್ಟಾಣಿಯಲ್ಲಿ ಮಾಡಿದರೆ ಉತ್ತಮ. ಮಿಕ್ಸಿಗೆ ಹಾಕಿದರೆ ಚೂರ್ಣದ ಸ್ವರೂಪ ಹೋಗಿ ನಯವಾದ ಹಿಟ್ಟಾಗುವುದು ಖಂಡಿತ.
ನಾಲ್ಕು ಕಪ್ ನೀರನ್ನು ಒಲೆಯ ಮೇಲಿಟ್ಟು ಚೆನ್ನಾಗಿ ಕುದಿಸಿ. ನೀರು ಕುದಿಯುತ್ತಿರುವಾಗ ನಿಂಬೆರಸ, ಉಪ್ಪು, ಪುಡಿಮಾಡಿದ ಬೆಲ್ಲ ಮತ್ತು ಮೇಲೆ ತಿಳಿಸಿದ ಚೂರ್ಣ ಮಿಶ್ರಣವನ್ನು ಹಾಕಿ. ಐದು ನಿಮಿಷ ಚೆನ್ನಾಗಿ ಕುದಿದ ನಂತರ ಕೆಳಕ್ಕಿಳಿಸಿ. ಬಿಸಿಯ ಹದವರಿತು ಕುಡಿಯಿರಿ. ಅಗತ್ಯವಿದ್ದರೆ ಹಾಲು ಬೆರೆಸಿ ಕುಡಿಯಬಹುದು. ಶೀತ, ಕೆಮ್ಮು, ದೇಹಾಲಸ್ಯ ದೂರಾಗಿಸಲು ದಿನಕ್ಕೊಂದು ಕಪ್ ನಂತೆ ಮೂರು ದಿನ ಸೇವಿಸಿದರೆ ಸಾಕು.



Click it and Unblock the Notifications











