Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಅಡುಗೆ ,ಆರೋಗ್ಯ :ಶುಂಠಿ ಕಷಾಯವಲ್ಲ. ಸೂಪ್
ಅಡುಗೆ ಮನೆಯ ಪ್ರಮುಖ ಸಾಂಬಾರು ಪದಾರ್ಥಗಳಲ್ಲಿ ಒಂದಾದ ಶುಂಠಿ ಹಾಗೂ ಮೆಣಸು ಸೇರಿಸಿ ಗರಮಾಗರಂ ಸೂಪ್ ಮಾಡೋಣ ಬನ್ನಿ, ಸಣ್ಣ ಪುಟ್ಟ ಕಾಯಿಲೆಗಳನ್ನು ದೂರಾಗಿಸಲು ಆರೋಗ್ಯ ವೃದ್ಧಿಗಾಗಿ ಈ ಸೂಪ್ ಆಗಾಗ ಕುಡಿಯುವುದು ಒಳ್ಳೆಯದು. ನೆಗಡಿಗಂತೂ ಉತ್ತಮ ಔಷಧಿ
ಮನಸ್ವಿನಿ. ನಾರಾವಿ
ಬೇಕಾಗುವ ಪದಾರ್ಥಗಳು:
ಒಣ ಶುಂಠಿ : 1 ಅಂಗುಲದಷ್ಟು ಉದ್ದದ ತುಂಡು
ಕರಿ ಮೆಣಸು: 1ಟೀ ಚಮಚ
ಜೀರಿಗೆ : 1 ಟೀ ಚಮಚ
ಕೊತ್ತಂಬರಿ ಬೀಜ (ಧನಿಯ): 1ಟೀ ಚಮಚ
ನಿಂಬೆ ಹಣ್ಣು : 1
ರುಚಿಗೆ ತಕ್ಕಷ್ಟು ಅಡುಗೆ ಉಪ್ಪು, ಬೆಲ್ಲ
ತಯಾರಿಸುವ ವಿಧಾನ: ಒಣ ಶುಂಠಿಯನ್ನು ತುಂಡು ಮಾಡಿ. ಕರಿಮೆಣಸು, ಜೀರಿಗೆ, ಕೊತ್ತಂಬರಿ ಬೀಜ ಇವುಗಳನ್ನು ಪ್ರತ್ಯೇಕವಾಗಿ ಹುರಿದಿಟ್ಟುಕೊಳ್ಳಿ. ನಂತರ ಎಲ್ಲಾ ಮಿಶ್ರಣವನ್ನು ಚೂರ್ಣದ ಹದಕ್ಕೆ ನುಣ್ಣಗೆ ಮಾಡಿಕೊಳ್ಳಿ, ಹುರಳು ಕಲ್ಲಿನಲ್ಲಿ ಅಥವಾ ಕುಟ್ಟಾಣಿಯಲ್ಲಿ ಮಾಡಿದರೆ ಉತ್ತಮ. ಮಿಕ್ಸಿಗೆ ಹಾಕಿದರೆ ಚೂರ್ಣದ ಸ್ವರೂಪ ಹೋಗಿ ನಯವಾದ ಹಿಟ್ಟಾಗುವುದು ಖಂಡಿತ.
ನಾಲ್ಕು ಕಪ್ ನೀರನ್ನು ಒಲೆಯ ಮೇಲಿಟ್ಟು ಚೆನ್ನಾಗಿ ಕುದಿಸಿ. ನೀರು ಕುದಿಯುತ್ತಿರುವಾಗ ನಿಂಬೆರಸ, ಉಪ್ಪು, ಪುಡಿಮಾಡಿದ ಬೆಲ್ಲ ಮತ್ತು ಮೇಲೆ ತಿಳಿಸಿದ ಚೂರ್ಣ ಮಿಶ್ರಣವನ್ನು ಹಾಕಿ. ಐದು ನಿಮಿಷ ಚೆನ್ನಾಗಿ ಕುದಿದ ನಂತರ ಕೆಳಕ್ಕಿಳಿಸಿ. ಬಿಸಿಯ ಹದವರಿತು ಕುಡಿಯಿರಿ. ಅಗತ್ಯವಿದ್ದರೆ ಹಾಲು ಬೆರೆಸಿ ಕುಡಿಯಬಹುದು. ಶೀತ, ಕೆಮ್ಮು, ದೇಹಾಲಸ್ಯ ದೂರಾಗಿಸಲು ದಿನಕ್ಕೊಂದು ಕಪ್ ನಂತೆ ಮೂರು ದಿನ ಸೇವಿಸಿದರೆ ಸಾಕು.



Click it and Unblock the Notifications