Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ದಾಳಿಂಬೆ ಸಿಪ್ಪೆ ಬಿಸಾಡುವ ಮುನ್ನ ಯೋಚಿಸಿ!
ದಾಳಿಂಬೆಯ ಆಕರ್ಷಕ ಬಣ್ಣವನ್ನು ನೋಡಿದಾಗಲೆ ಬಾಯಲ್ಲಿ ನೀರೂರುತ್ತದೆ. ಅಲ್ಲದೆ ದಾಳಿಂಬೆಯನ್ನು ತಿನ್ನುವುದು ಆರೋಗ್ಯಕ್ಕೆ ಕೂಡ ತುಂಬಾ ಒಳ್ಳೆಯದು.ದಾಳಿಂಬೆ ಕೊಂಡು ದಾಳಿಂಬೆಯ ಬೀಜಗಳನ್ನು ತಿಂದು ಅದರ ಸಿಪ್ಪೆಯನ್ನು ಬಿಸಾಡುವವರೆ ಹೆಚ್ಚು. ಇನ್ನು ಮುಂದೆ ಹಾಗೆ ಬಿಸಾಡಬೇಡಿ! ಏಕೆಂದರೆ ಇದರಲ್ಲಿ ತಿರುಳಿಗಿಂತ ಸಿಪ್ಪೆಯಲ್ಲಿ ಪೋಷಕಾಂಶಗಳು ಅಧಿಕವಿರುತ್ತದೆ. ಆದ್ದರಿಂದ ಸಿಪ್ಪೆಯನ್ನು ಒಣಗಿಸಿ ಇಡಬೇಕು. ಹೀಗೆ ಒಣಗಿಸಿಟ್ಟ ದಾಳಿಂಬೆ ಸಿಪ್ಪೆಯಿಂದ ತಂಬುಳಿ ಮಾಡಿ ಕುಡಿದರೆ ಬಾಯಿಗೆ ರುಚಿ ಮತ್ತು ಸೆಕೆಯಲ್ಲಿ ದೇಹದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಬೇಕಾಗುವ ಸಾಮಾಗ್ರಿಗಳು:
* ದಾಳಿಂಬೆ ಸಿಪ್ಪೆ
* ತೆಂಗಿನ ತುರಿ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ದಾಳಿಂಬೆ ಸಿಪ್ಪೆಯನ್ನು ಒಣಗಿಸಿ ಇಟ್ಟುಕೊಳ್ಳಬೇಕು.
2. ತಂಬುಳಿ ಮಾಡುವಾಗ ಸಿಪ್ಪೆಯನ್ನು ತುಪ್ಪದಲ್ಲಿ ಹುರಿಯಬೇಕು.
3. ನಂತರ ಇದನ್ನು ತುರಿಯ ಜೊತೆ ರುಬ್ಬಬೇಕು (ಗಮನಿಸಬೇಕಾದ ಅಂಶವೆಂದರೆ ದಾಳಿಂಬೆ ಸಿಪ್ಪೆಯನ್ನು ಅತ್ಯಲ್ಪ ಪ್ರಮಾಣದಲ್ಲಿ ಬಳಸಬೇಕು, ಇಲ್ಲದಿದ್ದರೆ ಒಗರಾಗುತ್ತದೆ).
4. ಈಗ ಇದಕ್ಕೆ ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಸೌಟ್ನಿಂದ ತಿರುಗಿಸಬೇಕು. ಈಗ ಬಾಯಾರಿಕೆಯಾದಾಗ ಕುಡಿಯಲು ರುಚಿಕರ ಮತ್ತು ಆರೋಗ್ಯಕರವಾದ ತಂಬುಳಿ ರೆಡಿ.
ಈ ರೀತಿ ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಕೂಡ ತಯಾರಿಸಬಹುದು. ಇತರ ತಂಪು ಪಾನೀಯ ಕುಡಿಯುವ ಬದಲು ಈ ರೀತಿ ಮಾಡಿ ಕುಡಿದರೆ ರುಚಿಯ ಜೊತೆ ಆರೋಗ್ಯಕ್ಕೆ ಒಳ್ಳೆಯದು. ರೋಗ ನಿರೋಧಕ ಸಾಮರ್ಥ್ಯ ಕೂಡ ಹೆಚ್ಚಾಗುವುದು.



Click it and Unblock the Notifications