Latest Updates
-
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು!
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ

ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?



Click it and Unblock the Notifications