Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ

ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?



Click it and Unblock the Notifications