Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ

ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?



Click it and Unblock the Notifications
