Latest Updates
-
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ

ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?



Click it and Unblock the Notifications