Latest Updates
-
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್ -
ಜಂಕ್ ಫುಡ್ ತಿನ್ನುವ ಮುನ್ನ ಎಚ್ಚರ! ಪ್ಯಾಕೆಟ್ ಮೇಲೆ ಬರಲಿದೆ ಸುಪ್ರೀಂ ಕೋರ್ಟ್ ಸೂಚಿಸಿದ ವಾರ್ನಿಂಗ್ ಲೇಬಲ್ -
ರೈಲ್ವೆ ನೀರಿನಲ್ಲಿ ಅಪಾಯಕಾರಿ ಇ-ಕೋಲೈ ಪತ್ತೆ: ಪ್ರಯಾಣಿಕರೇ, ಈ ತಪ್ಪುಗಳನ್ನು ಮಾಡಬೇಡಿ! -
ನಾಗರ ಪಂಚಮಿ ಸಂಭ್ರಮ: ಹಬ್ಬದ ಲುಕ್ ಹೆಚ್ಚಿಸಲು ಈ ಫ್ಯಾಷನ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬೆಂಗಳೂರಿನಲ್ಲಿ ಓಣಂ ಸಂಭ್ರಮ: ಓಣಸದ್ಯ ಮತ್ತು ಪೂಕಳಂ ಕಿಟ್ಗಳಿಗೆ ಭಾರಿ ಬೇಡಿಕೆ, ಈಗಲೇ ಬುಕ್ ಮಾಡಿ! -
ಮಳೆಗಾಲದಲ್ಲಿ ಡೆಂಗ್ಯೂ ಕಾಟ: ಮನೆಯಲ್ಲೇ 7 ನಿಮಿಷದ ಈ ಚೆಕ್ ಲಿಸ್ಟ್ ಪಾಲಿಸಿ, ಸುರಕ್ಷಿತವಾಗಿರಿ!
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ

ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?



Click it and Unblock the Notifications