Latest Updates
-
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ -
ವೀಕೆಂಡ್ ಪ್ಲಾನ್ ಮಾಡಿದ್ದೀರಾ? ಹವಾಮಾನ ವೈಪರೀತ್ಯದ ಎಚ್ಚರಿಕೆ: ನಿಮ್ಮ ಸುರಕ್ಷತೆಗಾಗಿ ಈ ಬದಲಾವಣೆ ಮಾಡಿಕೊಳ್ಳಿ! -
ಮುಂಬೈ ಬಿಸಿಲು ಮತ್ತು ಆರ್ದ್ರತೆ: 15 ನಿಮಿಷದಲ್ಲಿ ನಿಮ್ಮ ಮನೆಯನ್ನು ತಂಪಾಗಿರಿಸುವ ಸರಳ ಉಪಾಯಗಳು! -
ನಿಮ್ಮ ಆಹಾರದ ಪ್ಯಾಕೆಟ್ನಲ್ಲಿ ಸ್ಟೇಪ್ಲರ್ ಪಿನ್ ಇದೆಯೇ? ಎಚ್ಚರ, FSSAI ಕಠಿಣ ಆದೇಶ!
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ

ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?



Click it and Unblock the Notifications