Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ಕೆಮ್ಮು ನೆಗಡಿಗೆ ರಾಮಬಾಣ ಒಣ ಶುಂಠಿ ಕಷಾಯ

ಬೇಕಾದ ಪದಾರ್ಥಗಳು : ಒಣ ಶುಂಠಿ - ಕಿರುಬೆರಳಿನಷ್ಟು | ಕರಿ ಮೆಣಸು, ಜೀರಿಗೆ, ಕೊತ್ತಂಬರಿ ಬೀಜ (ಹವೀಜ) ಒಂದೊಂದು ಚಮಚ | ಒಂದು ನಿಂಬೆ ಹಣ್ಣು | ಉಪ್ಪು ಮತ್ತು ತುಣುಕು ಬೆಲ್ಲ | ಕೆಂಪು ಕಲ್ಲುಸಕ್ಕರೆ (ಬೇಕಿದ್ದರೆ).
ತಯಾರಿಸುವ ವಿಧಾನ :
ಒಣ ಶುಂಠಿಯನ್ನು ತುಂಡು ಮಾಡಿ ಅಥವಾ ಜಜ್ಜಿಕೊಳ್ಳಿ. ಕರಿಮೆಣಸು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ಪತ್ಯೇಕವಾಗಿ ಹುರಿದಿಟ್ಟುಕೊಂಡು ಅದಕ್ಕೆ ಒಣ ಶುಂಠಿ ಹಾಕಿ ಒರಳು ಕಲ್ಲಿನಲ್ಲಿ ನುಣ್ಣಗೆ ಪುಡಿಮಾಡಿಟ್ಟುಕೊಳ್ಳಿ. ನಗರಗಳಲ್ಲಿ ಜನರು ಅಪಾರ್ಟ್ ಮೆಂಟ್ ಸೇರಿಕೊಂಡಿರುವುದರಿಂದ ಒರಳು ಕಲ್ಲಿರುವುದು ಅನುಮಾನವೇ. ಆದ್ದರಿಂದ ಮಿಕ್ಸಿ ಉಪಯೋಗಿಸಿ ಪರವಾಗಿಲ್ಲ. ಈ ಪುಡಿ ಮಾಡಿಟ್ಟುಕೊಂಡ ಮಿಶ್ರಣವನ್ನು ಬಾಟಲಲ್ಲಿ ತೆಗೆದಿಟ್ಟುಕೊಂಡು ಯಾವಾಗ ಬೇಕೆಂದಾಗ ಕಷಾಯ ತಯಾರಿಸಲು ಉಪಯೋಗಿಸಬಹುದು.
ಸ್ಟೌ ಮೇಲೆ ನಾಲ್ಕು ಕಪ್ಪಿನಷ್ಟು ನೀರಿಟ್ಟು ಕುದಿಸಿ. ನೀರು ಕುದಿಯುತ್ತಿರುವಾಗಲೇ ನಿಂಬೆ ಹಣ್ಣಿನ ರಸ, ಉಪ್ಪು, ಪುಡಿ ಮಾಡಿದ ಬೆಲ್ಲ ಮತ್ತು ಮೇಲೆ ತಯಾರಿಸಿಕೊಂಡ ಪುಡಿಯನ್ನು ಹಾಕಿ ಮತ್ತು ಹತ್ತು ನಿಮಿಷ ಕುದಿಸಿ. ಶುಂಠಿ ಕಷಾಯ ಸಿಹಿಯಾಗಿರಬೇಕಿದ್ದರೆ ಕುದಿಸುವಾಗ ಕೆಂಪು ಕಲ್ಲುಸಕ್ಕರೆ ಸೇರಿಸಬಹುದು. ಕುದಿಸಿ ಇಳಿಸಿದ ನಂತರ ಸೋಸಿಕೊಂಡು ಬಿಸಿಯಿರುವಾಗಲೇ ಹಾಲು ಸೇರಿಸಿ ಅಥವಾ ಹಾಲು ಸೇರಿಸದೆಯೇ ಕುಡಿಯಿರಿ.
ಈ ಒಣ ಶುಂಠಿ ಕಷಾಯ ನೆಗಡಿಗೆ ರಾಮಬಾಣ. ಇದಕ್ಕೆ ಉತ್ತರ ಕರ್ನಾಟಕದಲ್ಲಿ ಅಲ್ಲಾ ಕಾಡೆ ಅಂತಲೂ ಕರೆಯುತ್ತಾರೆ. ಬಿಸಿಯಿರುವಾಗಲೇ ದಿನಕ್ಕೆರಡು ಬಾರಿ ಹೀರಿದರೆ ನೆಗಡಿ ಗಡಿಬಿಡಿಯಿಂದ ಮಾಯವಾಗಿರುತ್ತದೆ. ಇದಕ್ಕೆ ಒಂದು ಕಡ್ಡಿಯಷ್ಟು ಜೇಷ್ಠಮಧುವನ್ನು ಸೇರಿಸಿ ಕುದಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ. ಕೆಮ್ಮು ಮತ್ತು ನೆಗಡಿಗಾಗಿ ಔಷಧಿಗಳನ್ನು ತೆಗೆದುಕೊಳ್ಳುವ ಬದಲು ಈ ಕಷಾಯವನ್ನು ಅವಲಂಬಿಸುವುದು ಉತ್ತಮ, ಏನಂತೀರಿ?



Click it and Unblock the Notifications











