Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
2 ಬಗೆಯ ಶುಂಠಿ ಸೂಪ್- ಚಳಿಗಾಲದ ರೆಸಿಪಿ
ಚಳಿಗಾಲದಲ್ಲಿ ಶೀತ, ಕೆಮ್ಮು, ಗಂಟಲು ಕೆರೆತ ಈ ರೀತಿಯ ಸಮಸ್ಯೆಗಳು ಸಾಮಾನ್ಯವಾಗಿ ಕಂಡು ಬರುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಆಹಾರಕ್ರಮದ ಬಗ್ಗೆ ತುಂಬಾ ಎಚ್ಚರಿಕೆವಹಿಸಬೇಕು. ಅದರಲ್ಲು ಚಳಿಗಾಲಕ್ಕೂ ಮತ್ತು ಶುಂಠಿಗೂ ಬಹಳ ನಂಟು. ಶೀತ-ಕೆಮ್ಮಿನಂತಹ ಕಾಯಿಲೆಗಳನ್ನು ಹೊಡೆದು ಓಡಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
ಇಲ್ಲಿ ನಾವು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಟ್ಟು ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುವ 2 ಬಗೆಯ ಶುಂಠಿ ಸೂಪ್ ನ ರೆಸಿಪಿ ನೀಡಲಾಗಿದೆ ನೋಡಿ:

ಶುಂಠಿ ಸೂಪ್ 1:
ಬೇಕಾಗುವ ಸಾಮಾಗ್ರಿಗಳು:
ಪುಡಿ ಮಾಡಿದ ಶುಂಠಿ 5 ಚಮಚ
ನೀರು 2 ಕಪ್
ಜೇನು ಒಂದೂವರೆ ಚಮಚ ಅಥವಾ 2 ಚಮಚ
ನಿಂಬೆ ರಸ 2 ಚಮಚ
ತಯಾರಿಸುವ ವಿಧಾನ:
* ನೀರನ್ನು ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಶುಂಠಿಯನ್ನು ಹಾಕಿ ಸಾಧಾರಣ ಉರಿಯಲ್ಲಿ 4-5 ನಿಮಿಷ ಕುದಿಸಬೇಕು. ಹೀಗೆ ಕುದಿಸುವಾಗ ಸೌಟ್ ನಿಂದ ಆಗಾಗ ತಿರುಗಿಸುತ್ತಾ ಇರಬೇಕು.
* ನಂತರ ಜೇನು ಮತ್ತು ನಿಂಬೆ ರಸ ಹಾಕಿ ಉರಿಯಿಂದ ತೆಗೆದು ಸ್ವಲ್ಪ ಉರಿಯಿಂದ ತೆಗೆದು ಬಿಸಿಬಿಸಿಯಾಗಿ ಕುಡಿದರೆ ರುಚಿಯಾಗಿರುತ್ತದೆ ಮಾತ್ರವಲ್ಲ ಶೀತ, ಕೆಮ್ಮು ಇದ್ದರೆ ಮೈಲಿ ದೂರ ಓಡಿ ಹೋಗಿ ಬಿಡುತ್ತದೆ.
ಶುಂಠಿ ಸೂಪ್ 2:
ಬೇಕಾಗುವ ಸಾಮಾಗ್ರಿಗಳು:
ಕ್ಯಾರೆಟ್ 3
2 ಇಂಚಿನಷ್ಟು ದೊಡ್ಡದಿರುವ ಶುಂಠಿ
ಈರುಳ್ಳಿ 2
ತರಕಾರಿಗಳು 1 ಕಪ್
ಕಿತ್ತಳೆ ರಸ 3/4 ಕಪ್
ರುಚಿಗೆ ತಕ್ಕ ಉಪ್ಪು
ಕರಿಮೆಣಸಿನ ಪುಡಿ 1 ಚಮಚ
ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿ ಮಾಡಬೇಕು. ನಂತರ ಈರುಳ್ಳಿ ಮತ್ತು ಶುಂಠಿ ಹಾಕಿ ಈರುಳ್ಳಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ತರಕಾರಿ ಹಾಕಿ ತರಕಾರಿ ಬೇಯುವಷ್ಟು ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ, ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಬೇಕು. ಈಗ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಸಬೇಕು. ಈಗ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಇಡಬೇಕು. ನಂತರ ಇದನ್ನು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ರುಬ್ಬಿ ನಂತರ ಪಾತ್ರೆಯಲ್ಲಿ ಹಾಕಿ ಪುನಃ ಉರಿ ಮೇಲೆ ಇಟ್ಟು ಕುದಿಸಬೇಕು. ಹೀಗೆ ಕುದಿಸುವಾಗ ಕರಿಮೆಣಸಿನ ಪುಡಿ ಸೇರಿಸಿ.
ಇದನ್ನು ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ ಹಾಗೂ ಗಂಟಲು ಕೆರೆತ, ಕೆಮ್ಮು ಈ ರೀತಿಯ ತೊಂದರೆಗಳು ಶಮನವಾಗುವುದು.



Click it and Unblock the Notifications
