Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
2 ಬಗೆಯ ಶುಂಠಿ ಸೂಪ್- ಚಳಿಗಾಲದ ರೆಸಿಪಿ
ಚಳಿಗಾಲದಲ್ಲಿ ಶೀತ, ಕೆಮ್ಮು, ಗಂಟಲು ಕೆರೆತ ಈ ರೀತಿಯ ಸಮಸ್ಯೆಗಳು ಸಾಮಾನ್ಯವಾಗಿ ಕಂಡು ಬರುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಆಹಾರಕ್ರಮದ ಬಗ್ಗೆ ತುಂಬಾ ಎಚ್ಚರಿಕೆವಹಿಸಬೇಕು. ಅದರಲ್ಲು ಚಳಿಗಾಲಕ್ಕೂ ಮತ್ತು ಶುಂಠಿಗೂ ಬಹಳ ನಂಟು. ಶೀತ-ಕೆಮ್ಮಿನಂತಹ ಕಾಯಿಲೆಗಳನ್ನು ಹೊಡೆದು ಓಡಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
ಇಲ್ಲಿ ನಾವು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಟ್ಟು ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುವ 2 ಬಗೆಯ ಶುಂಠಿ ಸೂಪ್ ನ ರೆಸಿಪಿ ನೀಡಲಾಗಿದೆ ನೋಡಿ:

ಶುಂಠಿ ಸೂಪ್ 1:
ಬೇಕಾಗುವ ಸಾಮಾಗ್ರಿಗಳು:
ಪುಡಿ ಮಾಡಿದ ಶುಂಠಿ 5 ಚಮಚ
ನೀರು 2 ಕಪ್
ಜೇನು ಒಂದೂವರೆ ಚಮಚ ಅಥವಾ 2 ಚಮಚ
ನಿಂಬೆ ರಸ 2 ಚಮಚ
ತಯಾರಿಸುವ ವಿಧಾನ:
* ನೀರನ್ನು ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಶುಂಠಿಯನ್ನು ಹಾಕಿ ಸಾಧಾರಣ ಉರಿಯಲ್ಲಿ 4-5 ನಿಮಿಷ ಕುದಿಸಬೇಕು. ಹೀಗೆ ಕುದಿಸುವಾಗ ಸೌಟ್ ನಿಂದ ಆಗಾಗ ತಿರುಗಿಸುತ್ತಾ ಇರಬೇಕು.
* ನಂತರ ಜೇನು ಮತ್ತು ನಿಂಬೆ ರಸ ಹಾಕಿ ಉರಿಯಿಂದ ತೆಗೆದು ಸ್ವಲ್ಪ ಉರಿಯಿಂದ ತೆಗೆದು ಬಿಸಿಬಿಸಿಯಾಗಿ ಕುಡಿದರೆ ರುಚಿಯಾಗಿರುತ್ತದೆ ಮಾತ್ರವಲ್ಲ ಶೀತ, ಕೆಮ್ಮು ಇದ್ದರೆ ಮೈಲಿ ದೂರ ಓಡಿ ಹೋಗಿ ಬಿಡುತ್ತದೆ.
ಶುಂಠಿ ಸೂಪ್ 2:
ಬೇಕಾಗುವ ಸಾಮಾಗ್ರಿಗಳು:
ಕ್ಯಾರೆಟ್ 3
2 ಇಂಚಿನಷ್ಟು ದೊಡ್ಡದಿರುವ ಶುಂಠಿ
ಈರುಳ್ಳಿ 2
ತರಕಾರಿಗಳು 1 ಕಪ್
ಕಿತ್ತಳೆ ರಸ 3/4 ಕಪ್
ರುಚಿಗೆ ತಕ್ಕ ಉಪ್ಪು
ಕರಿಮೆಣಸಿನ ಪುಡಿ 1 ಚಮಚ
ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿ ಮಾಡಬೇಕು. ನಂತರ ಈರುಳ್ಳಿ ಮತ್ತು ಶುಂಠಿ ಹಾಕಿ ಈರುಳ್ಳಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ತರಕಾರಿ ಹಾಕಿ ತರಕಾರಿ ಬೇಯುವಷ್ಟು ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ, ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಬೇಕು. ಈಗ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಸಬೇಕು. ಈಗ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಇಡಬೇಕು. ನಂತರ ಇದನ್ನು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ರುಬ್ಬಿ ನಂತರ ಪಾತ್ರೆಯಲ್ಲಿ ಹಾಕಿ ಪುನಃ ಉರಿ ಮೇಲೆ ಇಟ್ಟು ಕುದಿಸಬೇಕು. ಹೀಗೆ ಕುದಿಸುವಾಗ ಕರಿಮೆಣಸಿನ ಪುಡಿ ಸೇರಿಸಿ.
ಇದನ್ನು ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ ಹಾಗೂ ಗಂಟಲು ಕೆರೆತ, ಕೆಮ್ಮು ಈ ರೀತಿಯ ತೊಂದರೆಗಳು ಶಮನವಾಗುವುದು.



Click it and Unblock the Notifications