Latest Updates
-
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
2 ಬಗೆಯ ಶುಂಠಿ ಸೂಪ್- ಚಳಿಗಾಲದ ರೆಸಿಪಿ
ಚಳಿಗಾಲದಲ್ಲಿ ಶೀತ, ಕೆಮ್ಮು, ಗಂಟಲು ಕೆರೆತ ಈ ರೀತಿಯ ಸಮಸ್ಯೆಗಳು ಸಾಮಾನ್ಯವಾಗಿ ಕಂಡು ಬರುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಆಹಾರಕ್ರಮದ ಬಗ್ಗೆ ತುಂಬಾ ಎಚ್ಚರಿಕೆವಹಿಸಬೇಕು. ಅದರಲ್ಲು ಚಳಿಗಾಲಕ್ಕೂ ಮತ್ತು ಶುಂಠಿಗೂ ಬಹಳ ನಂಟು. ಶೀತ-ಕೆಮ್ಮಿನಂತಹ ಕಾಯಿಲೆಗಳನ್ನು ಹೊಡೆದು ಓಡಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
ಇಲ್ಲಿ ನಾವು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಟ್ಟು ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುವ 2 ಬಗೆಯ ಶುಂಠಿ ಸೂಪ್ ನ ರೆಸಿಪಿ ನೀಡಲಾಗಿದೆ ನೋಡಿ:

ಶುಂಠಿ ಸೂಪ್ 1:
ಬೇಕಾಗುವ ಸಾಮಾಗ್ರಿಗಳು:
ಪುಡಿ ಮಾಡಿದ ಶುಂಠಿ 5 ಚಮಚ
ನೀರು 2 ಕಪ್
ಜೇನು ಒಂದೂವರೆ ಚಮಚ ಅಥವಾ 2 ಚಮಚ
ನಿಂಬೆ ರಸ 2 ಚಮಚ
ತಯಾರಿಸುವ ವಿಧಾನ:
* ನೀರನ್ನು ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಶುಂಠಿಯನ್ನು ಹಾಕಿ ಸಾಧಾರಣ ಉರಿಯಲ್ಲಿ 4-5 ನಿಮಿಷ ಕುದಿಸಬೇಕು. ಹೀಗೆ ಕುದಿಸುವಾಗ ಸೌಟ್ ನಿಂದ ಆಗಾಗ ತಿರುಗಿಸುತ್ತಾ ಇರಬೇಕು.
* ನಂತರ ಜೇನು ಮತ್ತು ನಿಂಬೆ ರಸ ಹಾಕಿ ಉರಿಯಿಂದ ತೆಗೆದು ಸ್ವಲ್ಪ ಉರಿಯಿಂದ ತೆಗೆದು ಬಿಸಿಬಿಸಿಯಾಗಿ ಕುಡಿದರೆ ರುಚಿಯಾಗಿರುತ್ತದೆ ಮಾತ್ರವಲ್ಲ ಶೀತ, ಕೆಮ್ಮು ಇದ್ದರೆ ಮೈಲಿ ದೂರ ಓಡಿ ಹೋಗಿ ಬಿಡುತ್ತದೆ.
ಶುಂಠಿ ಸೂಪ್ 2:
ಬೇಕಾಗುವ ಸಾಮಾಗ್ರಿಗಳು:
ಕ್ಯಾರೆಟ್ 3
2 ಇಂಚಿನಷ್ಟು ದೊಡ್ಡದಿರುವ ಶುಂಠಿ
ಈರುಳ್ಳಿ 2
ತರಕಾರಿಗಳು 1 ಕಪ್
ಕಿತ್ತಳೆ ರಸ 3/4 ಕಪ್
ರುಚಿಗೆ ತಕ್ಕ ಉಪ್ಪು
ಕರಿಮೆಣಸಿನ ಪುಡಿ 1 ಚಮಚ
ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿ ಮಾಡಬೇಕು. ನಂತರ ಈರುಳ್ಳಿ ಮತ್ತು ಶುಂಠಿ ಹಾಕಿ ಈರುಳ್ಳಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ತರಕಾರಿ ಹಾಕಿ ತರಕಾರಿ ಬೇಯುವಷ್ಟು ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ, ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಬೇಕು. ಈಗ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಸಬೇಕು. ಈಗ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಇಡಬೇಕು. ನಂತರ ಇದನ್ನು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ರುಬ್ಬಿ ನಂತರ ಪಾತ್ರೆಯಲ್ಲಿ ಹಾಕಿ ಪುನಃ ಉರಿ ಮೇಲೆ ಇಟ್ಟು ಕುದಿಸಬೇಕು. ಹೀಗೆ ಕುದಿಸುವಾಗ ಕರಿಮೆಣಸಿನ ಪುಡಿ ಸೇರಿಸಿ.
ಇದನ್ನು ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ ಹಾಗೂ ಗಂಟಲು ಕೆರೆತ, ಕೆಮ್ಮು ಈ ರೀತಿಯ ತೊಂದರೆಗಳು ಶಮನವಾಗುವುದು.



Click it and Unblock the Notifications