Latest Updates
-
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ!
2 ಬಗೆಯ ಶುಂಠಿ ಸೂಪ್- ಚಳಿಗಾಲದ ರೆಸಿಪಿ
ಚಳಿಗಾಲದಲ್ಲಿ ಶೀತ, ಕೆಮ್ಮು, ಗಂಟಲು ಕೆರೆತ ಈ ರೀತಿಯ ಸಮಸ್ಯೆಗಳು ಸಾಮಾನ್ಯವಾಗಿ ಕಂಡು ಬರುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಆಹಾರಕ್ರಮದ ಬಗ್ಗೆ ತುಂಬಾ ಎಚ್ಚರಿಕೆವಹಿಸಬೇಕು. ಅದರಲ್ಲು ಚಳಿಗಾಲಕ್ಕೂ ಮತ್ತು ಶುಂಠಿಗೂ ಬಹಳ ನಂಟು. ಶೀತ-ಕೆಮ್ಮಿನಂತಹ ಕಾಯಿಲೆಗಳನ್ನು ಹೊಡೆದು ಓಡಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
ಇಲ್ಲಿ ನಾವು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಟ್ಟು ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುವ 2 ಬಗೆಯ ಶುಂಠಿ ಸೂಪ್ ನ ರೆಸಿಪಿ ನೀಡಲಾಗಿದೆ ನೋಡಿ:

ಶುಂಠಿ ಸೂಪ್ 1:
ಬೇಕಾಗುವ ಸಾಮಾಗ್ರಿಗಳು:
ಪುಡಿ ಮಾಡಿದ ಶುಂಠಿ 5 ಚಮಚ
ನೀರು 2 ಕಪ್
ಜೇನು ಒಂದೂವರೆ ಚಮಚ ಅಥವಾ 2 ಚಮಚ
ನಿಂಬೆ ರಸ 2 ಚಮಚ
ತಯಾರಿಸುವ ವಿಧಾನ:
* ನೀರನ್ನು ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಶುಂಠಿಯನ್ನು ಹಾಕಿ ಸಾಧಾರಣ ಉರಿಯಲ್ಲಿ 4-5 ನಿಮಿಷ ಕುದಿಸಬೇಕು. ಹೀಗೆ ಕುದಿಸುವಾಗ ಸೌಟ್ ನಿಂದ ಆಗಾಗ ತಿರುಗಿಸುತ್ತಾ ಇರಬೇಕು.
* ನಂತರ ಜೇನು ಮತ್ತು ನಿಂಬೆ ರಸ ಹಾಕಿ ಉರಿಯಿಂದ ತೆಗೆದು ಸ್ವಲ್ಪ ಉರಿಯಿಂದ ತೆಗೆದು ಬಿಸಿಬಿಸಿಯಾಗಿ ಕುಡಿದರೆ ರುಚಿಯಾಗಿರುತ್ತದೆ ಮಾತ್ರವಲ್ಲ ಶೀತ, ಕೆಮ್ಮು ಇದ್ದರೆ ಮೈಲಿ ದೂರ ಓಡಿ ಹೋಗಿ ಬಿಡುತ್ತದೆ.
ಶುಂಠಿ ಸೂಪ್ 2:
ಬೇಕಾಗುವ ಸಾಮಾಗ್ರಿಗಳು:
ಕ್ಯಾರೆಟ್ 3
2 ಇಂಚಿನಷ್ಟು ದೊಡ್ಡದಿರುವ ಶುಂಠಿ
ಈರುಳ್ಳಿ 2
ತರಕಾರಿಗಳು 1 ಕಪ್
ಕಿತ್ತಳೆ ರಸ 3/4 ಕಪ್
ರುಚಿಗೆ ತಕ್ಕ ಉಪ್ಪು
ಕರಿಮೆಣಸಿನ ಪುಡಿ 1 ಚಮಚ
ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿ ಮಾಡಬೇಕು. ನಂತರ ಈರುಳ್ಳಿ ಮತ್ತು ಶುಂಠಿ ಹಾಕಿ ಈರುಳ್ಳಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ತರಕಾರಿ ಹಾಕಿ ತರಕಾರಿ ಬೇಯುವಷ್ಟು ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ, ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಬೇಕು. ಈಗ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಸಬೇಕು. ಈಗ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಇಡಬೇಕು. ನಂತರ ಇದನ್ನು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ರುಬ್ಬಿ ನಂತರ ಪಾತ್ರೆಯಲ್ಲಿ ಹಾಕಿ ಪುನಃ ಉರಿ ಮೇಲೆ ಇಟ್ಟು ಕುದಿಸಬೇಕು. ಹೀಗೆ ಕುದಿಸುವಾಗ ಕರಿಮೆಣಸಿನ ಪುಡಿ ಸೇರಿಸಿ.
ಇದನ್ನು ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ ಹಾಗೂ ಗಂಟಲು ಕೆರೆತ, ಕೆಮ್ಮು ಈ ರೀತಿಯ ತೊಂದರೆಗಳು ಶಮನವಾಗುವುದು.



Click it and Unblock the Notifications