Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
2 ಬಗೆಯ ಶುಂಠಿ ಸೂಪ್- ಚಳಿಗಾಲದ ರೆಸಿಪಿ
ಚಳಿಗಾಲದಲ್ಲಿ ಶೀತ, ಕೆಮ್ಮು, ಗಂಟಲು ಕೆರೆತ ಈ ರೀತಿಯ ಸಮಸ್ಯೆಗಳು ಸಾಮಾನ್ಯವಾಗಿ ಕಂಡು ಬರುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಆಹಾರಕ್ರಮದ ಬಗ್ಗೆ ತುಂಬಾ ಎಚ್ಚರಿಕೆವಹಿಸಬೇಕು. ಅದರಲ್ಲು ಚಳಿಗಾಲಕ್ಕೂ ಮತ್ತು ಶುಂಠಿಗೂ ಬಹಳ ನಂಟು. ಶೀತ-ಕೆಮ್ಮಿನಂತಹ ಕಾಯಿಲೆಗಳನ್ನು ಹೊಡೆದು ಓಡಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ.
ಇಲ್ಲಿ ನಾವು ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಟ್ಟು ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸುವ 2 ಬಗೆಯ ಶುಂಠಿ ಸೂಪ್ ನ ರೆಸಿಪಿ ನೀಡಲಾಗಿದೆ ನೋಡಿ:

ಶುಂಠಿ ಸೂಪ್ 1:
ಬೇಕಾಗುವ ಸಾಮಾಗ್ರಿಗಳು:
ಪುಡಿ ಮಾಡಿದ ಶುಂಠಿ 5 ಚಮಚ
ನೀರು 2 ಕಪ್
ಜೇನು ಒಂದೂವರೆ ಚಮಚ ಅಥವಾ 2 ಚಮಚ
ನಿಂಬೆ ರಸ 2 ಚಮಚ
ತಯಾರಿಸುವ ವಿಧಾನ:
* ನೀರನ್ನು ಚೆನ್ನಾಗಿ ಕುದಿಸಬೇಕು. ನಂತರ ಅದಕ್ಕೆ ಶುಂಠಿಯನ್ನು ಹಾಕಿ ಸಾಧಾರಣ ಉರಿಯಲ್ಲಿ 4-5 ನಿಮಿಷ ಕುದಿಸಬೇಕು. ಹೀಗೆ ಕುದಿಸುವಾಗ ಸೌಟ್ ನಿಂದ ಆಗಾಗ ತಿರುಗಿಸುತ್ತಾ ಇರಬೇಕು.
* ನಂತರ ಜೇನು ಮತ್ತು ನಿಂಬೆ ರಸ ಹಾಕಿ ಉರಿಯಿಂದ ತೆಗೆದು ಸ್ವಲ್ಪ ಉರಿಯಿಂದ ತೆಗೆದು ಬಿಸಿಬಿಸಿಯಾಗಿ ಕುಡಿದರೆ ರುಚಿಯಾಗಿರುತ್ತದೆ ಮಾತ್ರವಲ್ಲ ಶೀತ, ಕೆಮ್ಮು ಇದ್ದರೆ ಮೈಲಿ ದೂರ ಓಡಿ ಹೋಗಿ ಬಿಡುತ್ತದೆ.
ಶುಂಠಿ ಸೂಪ್ 2:
ಬೇಕಾಗುವ ಸಾಮಾಗ್ರಿಗಳು:
ಕ್ಯಾರೆಟ್ 3
2 ಇಂಚಿನಷ್ಟು ದೊಡ್ಡದಿರುವ ಶುಂಠಿ
ಈರುಳ್ಳಿ 2
ತರಕಾರಿಗಳು 1 ಕಪ್
ಕಿತ್ತಳೆ ರಸ 3/4 ಕಪ್
ರುಚಿಗೆ ತಕ್ಕ ಉಪ್ಪು
ಕರಿಮೆಣಸಿನ ಪುಡಿ 1 ಚಮಚ
ಎಣ್ಣೆ 2 ಚಮಚ
ತಯಾರಿಸುವ ವಿಧಾನ:
1. ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿ ಬಿಸಿ ಮಾಡಬೇಕು. ನಂತರ ಈರುಳ್ಳಿ ಮತ್ತು ಶುಂಠಿ ಹಾಕಿ ಈರುಳ್ಳಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
2. ಈಗ ಉರಿಯನ್ನು ಸ್ವಲ್ಪ ಕಡಿಮೆ ಮಾಡಿ ತರಕಾರಿ ಹಾಕಿ ತರಕಾರಿ ಬೇಯುವಷ್ಟು ನೀರು ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ, ನೀರಿನಂಶ ಕಡಿಮೆಯಾಗಿ ಸ್ವಲ್ಪ ಗಟ್ಟಿಯಾಗುವವರೆಗೆ ಕುದಿಸಬೇಕು. ಈಗ ಕಿತ್ತಳೆ ರಸವನ್ನು ಸೇರಿಸಿ 2-3 ನಿಮಿಷ ಕುದಿಸಬೇಕು. ಈಗ ಪಾತ್ರೆಯನ್ನು ಉರಿಯಿಂದ ತೆಗೆದು ತಣ್ಣಗಾಗಲು ಇಡಬೇಕು. ನಂತರ ಇದನ್ನು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ರುಬ್ಬಿ ನಂತರ ಪಾತ್ರೆಯಲ್ಲಿ ಹಾಕಿ ಪುನಃ ಉರಿ ಮೇಲೆ ಇಟ್ಟು ಕುದಿಸಬೇಕು. ಹೀಗೆ ಕುದಿಸುವಾಗ ಕರಿಮೆಣಸಿನ ಪುಡಿ ಸೇರಿಸಿ.
ಇದನ್ನು ಬಿಸಿ ಬಿಸಿಯಾಗಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ ಹಾಗೂ ಗಂಟಲು ಕೆರೆತ, ಕೆಮ್ಮು ಈ ರೀತಿಯ ತೊಂದರೆಗಳು ಶಮನವಾಗುವುದು.



Click it and Unblock the Notifications