Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸೂಪ್
ಮಳೆಗಾಲದಲ್ಲಿ ಬಿಸಿಬಿಸಿಯಾದ ಮಸಾಲ ಟೀ ಅಥವಾ ಸೂಪ್ ಕುಡಿಯುವುದು ಒಳ್ಳೆಯದು. ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಈ ಆಹಾರ ಸಾಮಾಗ್ರಿಗಳು ಮೈಯನ್ನು ಬೆಚ್ಚಗಿಡಲು ಮತ್ತು ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಔಷಧೀಯ ಗುಣವಿರುವ ಈ ಪದಾರ್ಥಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ಸೂಪ್ ತಯಾರಿಸಬಹುದಾಗಿದ್ದು ಸೂಪ್ ತಯಾರಿಸುವ ಸರಳ ವಿಧಾನ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
* 2 ಈರುಳ್ಳಿ
* 1೦ ಬೆಳ್ಳುಳ್ಳಿ ಎಸಳು
* ಒಂದು ಇಂಚಿನಷ್ಟು ದೊಡ್ಡದಿರುವ ಶುಂಠಿ
* 2 ಚಮಚ ತುಪ್ಪ
* 1/2 ಚಮಚ ಅರಿಶಿಣ ಪುಡಿ
* ಒಂದು ಚಮಚ ಸಕ್ಕರೆ
* ಒಂದು ಚಮಚ ಕಾಳು ಮೆಣಸಿನ ಪುಡಿ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿಯನ್ನು ಸಿಪ್ಪೆ ತೆಗೆದು ಉದ್ದುದ್ದವಾಗಿ ಕತ್ತರಿಸಬೇಕು.
2. ಒಂದು ಬಾಣಲೆಯಲ್ಲಿ 2 ಚಮಚ ತುಪ್ಪ ಹಾಕಿ ಅದರಲ್ಲಿ ಈರುಳ್ಳಿ, ಬೆಳ್ಳುಳ್ಳು, ಶುಂಠಿ ತುಂಡು ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ನಂತರ ಈ ಎಲ್ಲಾ ಮಿಶ್ರಣದ ಜೊತೆ ಕಾಲು ಚಮಚ ಅರಿಶಿಣ ಪುಡಿ ಹಾಕಿ ಮಿಕ್ಸಿಯಲ್ಲಿ ತರಿತರಿಯಾಗಿ ರುಬ್ಬಿಕೊಳ್ಳಬೇಕು.
4. ನಂತರ ಪಾತ್ರೆಗೆ ಹಾಕಿ ಸೂಪ್ ಹದಕ್ಕೆ ಬರುವಷ್ಟು ನೀರು ಸೇರಿಸಿ ಕುದಿಸಬೇಕು.
5. ಈರುಳ್ಳಿ ಮಿಶ್ರಣ ಕುದಿಯುತ್ತಿರುವಾಗ 1೦ ಚಮಚ ಹಾಲು, ರುಚಿಗೆ ತಕ್ಕ ಉಪ್ಪು, ಒಂದು ಚಮಚ ಸಕ್ಕರೆ, ಒಂದು ಚಮಚ ಕಾಳುಮೆಣಸಿನ ಪುಡಿ ಬೆರೆಸಿ 2-3 ನಿಮಿಷ ಕುದಿಸಬೇಕು.
ಈ ಸೂಪ್ ಬಿಸಿಬಿಸಿಯಾಗಿರುವಾಗಲೇ ಕುಡಿದರೆ ತುಂಬಾ ರುಚಿಯಾಗಿರುತ್ತದೆ. ನೆಗಡಿ, ಗಂಟಲು ನೋವು, ಕೆಮ್ಮು ಇದ್ದಾಗ ಈ ಸೂಪ್ ಮಾಡಿ ಕುಡಿದರೆ ಶೀತ, ಕೆಮ್ಮು ಸಮಸ್ಯೆ ನಿವಾರಣೆಯಾಗುವುದು.



Click it and Unblock the Notifications
