Just In
- 5 min ago ವೃಷಭ ರಾಶಿಗೆ ಗುರು ಸಂಚಾರ: 11ನೇ ಮನೆಯಲ್ಲಿ ಗುರು ಕರ್ಕ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
- 2 hrs ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 2 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 15 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
Don't Miss
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸೂಪ್
ಮಳೆಗಾಲದಲ್ಲಿ ಬಿಸಿಬಿಸಿಯಾದ ಮಸಾಲ ಟೀ ಅಥವಾ ಸೂಪ್ ಕುಡಿಯುವುದು ಒಳ್ಳೆಯದು. ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಈ ಆಹಾರ ಸಾಮಾಗ್ರಿಗಳು ಮೈಯನ್ನು ಬೆಚ್ಚಗಿಡಲು ಮತ್ತು ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಔಷಧೀಯ ಗುಣವಿರುವ ಈ ಪದಾರ್ಥಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ಸೂಪ್ ತಯಾರಿಸಬಹುದಾಗಿದ್ದು ಸೂಪ್ ತಯಾರಿಸುವ ಸರಳ ವಿಧಾನ ನೋಡಿ ಇಲ್ಲಿದೆ.
ಬೇಕಾಗುವ
ಸಾಮಾಗ್ರಿಗಳು:
*
2
ಈರುಳ್ಳಿ
*
1೦
ಬೆಳ್ಳುಳ್ಳಿ
ಎಸಳು
*
ಒಂದು
ಇಂಚಿನಷ್ಟು
ದೊಡ್ಡದಿರುವ
ಶುಂಠಿ
*
2
ಚಮಚ
ತುಪ್ಪ
*
1/2
ಚಮಚ
ಅರಿಶಿಣ
ಪುಡಿ
*
ಒಂದು
ಚಮಚ
ಸಕ್ಕರೆ
*
ಒಂದು
ಚಮಚ
ಕಾಳು
ಮೆಣಸಿನ
ಪುಡಿ
*
ರುಚಿಗೆ
ತಕ್ಕ
ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿಯನ್ನು ಸಿಪ್ಪೆ ತೆಗೆದು ಉದ್ದುದ್ದವಾಗಿ ಕತ್ತರಿಸಬೇಕು.
2. ಒಂದು ಬಾಣಲೆಯಲ್ಲಿ 2 ಚಮಚ ತುಪ್ಪ ಹಾಕಿ ಅದರಲ್ಲಿ ಈರುಳ್ಳಿ, ಬೆಳ್ಳುಳ್ಳು, ಶುಂಠಿ ತುಂಡು ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ನಂತರ ಈ ಎಲ್ಲಾ ಮಿಶ್ರಣದ ಜೊತೆ ಕಾಲು ಚಮಚ ಅರಿಶಿಣ ಪುಡಿ ಹಾಕಿ ಮಿಕ್ಸಿಯಲ್ಲಿ ತರಿತರಿಯಾಗಿ ರುಬ್ಬಿಕೊಳ್ಳಬೇಕು.
4. ನಂತರ ಪಾತ್ರೆಗೆ ಹಾಕಿ ಸೂಪ್ ಹದಕ್ಕೆ ಬರುವಷ್ಟು ನೀರು ಸೇರಿಸಿ ಕುದಿಸಬೇಕು.
5. ಈರುಳ್ಳಿ ಮಿಶ್ರಣ ಕುದಿಯುತ್ತಿರುವಾಗ 1೦ ಚಮಚ ಹಾಲು, ರುಚಿಗೆ ತಕ್ಕ ಉಪ್ಪು, ಒಂದು ಚಮಚ ಸಕ್ಕರೆ, ಒಂದು ಚಮಚ ಕಾಳುಮೆಣಸಿನ ಪುಡಿ ಬೆರೆಸಿ 2-3 ನಿಮಿಷ ಕುದಿಸಬೇಕು.
ಈ ಸೂಪ್ ಬಿಸಿಬಿಸಿಯಾಗಿರುವಾಗಲೇ ಕುಡಿದರೆ ತುಂಬಾ ರುಚಿಯಾಗಿರುತ್ತದೆ. ನೆಗಡಿ, ಗಂಟಲು ನೋವು, ಕೆಮ್ಮು ಇದ್ದಾಗ ಈ ಸೂಪ್ ಮಾಡಿ ಕುಡಿದರೆ ಶೀತ, ಕೆಮ್ಮು ಸಮಸ್ಯೆ ನಿವಾರಣೆಯಾಗುವುದು.