Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸೂಪ್
ಮಳೆಗಾಲದಲ್ಲಿ ಬಿಸಿಬಿಸಿಯಾದ ಮಸಾಲ ಟೀ ಅಥವಾ ಸೂಪ್ ಕುಡಿಯುವುದು ಒಳ್ಳೆಯದು. ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಈ ಆಹಾರ ಸಾಮಾಗ್ರಿಗಳು ಮೈಯನ್ನು ಬೆಚ್ಚಗಿಡಲು ಮತ್ತು ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಔಷಧೀಯ ಗುಣವಿರುವ ಈ ಪದಾರ್ಥಗಳಿಂದ ಆರೋಗ್ಯಕರ ಮತ್ತು ರುಚಿಕರವಾದ ಸೂಪ್ ತಯಾರಿಸಬಹುದಾಗಿದ್ದು ಸೂಪ್ ತಯಾರಿಸುವ ಸರಳ ವಿಧಾನ ನೋಡಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
* 2 ಈರುಳ್ಳಿ
* 1೦ ಬೆಳ್ಳುಳ್ಳಿ ಎಸಳು
* ಒಂದು ಇಂಚಿನಷ್ಟು ದೊಡ್ಡದಿರುವ ಶುಂಠಿ
* 2 ಚಮಚ ತುಪ್ಪ
* 1/2 ಚಮಚ ಅರಿಶಿಣ ಪುಡಿ
* ಒಂದು ಚಮಚ ಸಕ್ಕರೆ
* ಒಂದು ಚಮಚ ಕಾಳು ಮೆಣಸಿನ ಪುಡಿ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿಯನ್ನು ಸಿಪ್ಪೆ ತೆಗೆದು ಉದ್ದುದ್ದವಾಗಿ ಕತ್ತರಿಸಬೇಕು.
2. ಒಂದು ಬಾಣಲೆಯಲ್ಲಿ 2 ಚಮಚ ತುಪ್ಪ ಹಾಕಿ ಅದರಲ್ಲಿ ಈರುಳ್ಳಿ, ಬೆಳ್ಳುಳ್ಳು, ಶುಂಠಿ ತುಂಡು ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ನಂತರ ಈ ಎಲ್ಲಾ ಮಿಶ್ರಣದ ಜೊತೆ ಕಾಲು ಚಮಚ ಅರಿಶಿಣ ಪುಡಿ ಹಾಕಿ ಮಿಕ್ಸಿಯಲ್ಲಿ ತರಿತರಿಯಾಗಿ ರುಬ್ಬಿಕೊಳ್ಳಬೇಕು.
4. ನಂತರ ಪಾತ್ರೆಗೆ ಹಾಕಿ ಸೂಪ್ ಹದಕ್ಕೆ ಬರುವಷ್ಟು ನೀರು ಸೇರಿಸಿ ಕುದಿಸಬೇಕು.
5. ಈರುಳ್ಳಿ ಮಿಶ್ರಣ ಕುದಿಯುತ್ತಿರುವಾಗ 1೦ ಚಮಚ ಹಾಲು, ರುಚಿಗೆ ತಕ್ಕ ಉಪ್ಪು, ಒಂದು ಚಮಚ ಸಕ್ಕರೆ, ಒಂದು ಚಮಚ ಕಾಳುಮೆಣಸಿನ ಪುಡಿ ಬೆರೆಸಿ 2-3 ನಿಮಿಷ ಕುದಿಸಬೇಕು.
ಈ ಸೂಪ್ ಬಿಸಿಬಿಸಿಯಾಗಿರುವಾಗಲೇ ಕುಡಿದರೆ ತುಂಬಾ ರುಚಿಯಾಗಿರುತ್ತದೆ. ನೆಗಡಿ, ಗಂಟಲು ನೋವು, ಕೆಮ್ಮು ಇದ್ದಾಗ ಈ ಸೂಪ್ ಮಾಡಿ ಕುಡಿದರೆ ಶೀತ, ಕೆಮ್ಮು ಸಮಸ್ಯೆ ನಿವಾರಣೆಯಾಗುವುದು.



Click it and Unblock the Notifications