Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಬಾಳೆದಿಂಡು ಹಾಗೂ ಬಾಳೆಹೂ ಹಾಕಿ ಮಾಡುವ ಪಲ್ಯ:ಕಿಡ್ನಿ ಸ್ಟೋನ್ ಹೋಗಲಾಡಿಸಲು ತುಂಬಾ ಒಳ್ಳೆಯದು
ಬಾಳೆಹೂವು ಹಾಗೂ ಬಾಳೆದಿಂಡು ಮಿಕ್ಸ್ ಮಾಡಿ ಮಾಡುವ ಪಲ್ಯದ ರೆಸಿಪಿ, ಇವುಗಳು ತುಂಬಾ ಟೇಸ್ಟ್ ಆಗಿರುತ್ತದೆ, ಅಲ್ಲದೆ ರುಚಿಯೂ ಸೂಪರ್ ಆಗಿರುತ್ತದೆ, ಇದೊಂದು ಸಿಂಪಲ್ ರೆಸಿಪಿ, ಆದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ ಬನ್ನಿ:

ಬೇಕಾಗುವ ಸಾಮಗ್ರಿ
ಬಾಳೆದಿಂಡು 1 ಚಿಕ್ಕ ಪೀಸ್
ಬಾಳೆಹೂ 1
ಈರುಳ್ಳಿ 1
ಹಸಿ ಮೆಣಸು 2-3
ಎಣ್ಣೆ 2 ಚಮಚ
ಸ್ವಲ್ಪ ಕರಿಬೇವು
ಸ್ವಲ್ಪ ಸಾಸಿವೆ
ತೆಂಗಿನ ತುರಿ ಅಥವಾ 2 ಮೊಟ್ಟೆ
ಮಾಡುವ ವಿಧಾನ:
- ಬಾಳೆದಿಂಡು ಹಾಗೂ ಹೂವನ್ನು ಚಿಕ್ಕದಾಗಿ ಕತ್ತರಿಸಿ(ತುಂಬಾ ಚಿಕ್ಕದಾಗಿ ಕತ್ತರಿಸಬೇಕು)
- ನಂತರ ಅದನ್ನು ಒಂದು ಪಾತ್ರೆಗೆ ಹಾಕಿ ನೀರು ಹಾಕಿಡಿ, ಅದರ ಕರೆ ಹೋಗಬೇಕು.
- ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ
- ನಂತರ ಸಾಸಿವೆ ಹಾಕಿ
- ಸಾಸಿವೆ ಚಟ್ಪಟ್ ಶಬ್ದ ಮಾಡುವಾಗ ಕರಿಬೇವು ಹಾಕಿ
- ನಂತರ ಈರುಳ್ಳಿ ಹಾಕಿ, ಹಸಿ ಮೆಣಸು ಹಾಕಿ 2 ನಿಮಿಷ ಫ್ರೈ ಮಾಡಿ
- ಈಗ ಕತ್ತರಿಸಿಟ್ಟ ಬಾಳೆಹೂವು ಹಾಗೂ ಬಾಳೆದಿಂಡು ಹಾಕಿ ಹಾಕಿ ಮಿಕ್ಸ್ ಮಾಡಿ
- ನಂತರ ಸ್ವಲ್ಪ ನೀರು ಹಾಕಿ ಬೇಯಿಸಿ
- ನೀರು ಡ್ರೈಯಾಗುವವರೆಗೆ ಬೇಯಿಸಿ
- ನೀರು ಆವಿಯಾದ ಮೇಲೆ ತೆಂಗಿನ ತುರಿ ಹಾಕಿ ಮಿಕ್ಸ್ ಮಾಡಿ
- ನೀವು ತೆಂಗಿನತುರಿ ಬದಲಿಗೆ ಮೊಟ್ಟೆ ಹಾಕಿ ಮಿಕ್ಸ್ ಮಾಡಿದರೆ ಇನ್ನೂ ರುಚಿಯಾಗಿರುತ್ತದೆ.
- ಈ ಪಲ್ಯ ಸೇವನೆಯ ಪ್ರಯೋಜನಗಳು
- ದೇಹವನ್ನು ಡಿಟಾ್ಸ್ ಮಾಡುತ್ತದೆ: ಇದಲ್ಲಿರುವ ನಾರಿನಂಶ ಹೊಟ್ಟೆಯನ್ನು ಡಿಟಾಕ್ಸ್ ಮಾಡಿ ದೇಹದಲ್ಲಿರುವ ಬೇಡದ ಕಶ್ಮಲವನ್ನು ಹೊರ ಹಾಕಲು ಸಹಕಾರಿ. ಹೊಟ್ಟೆ ಶುದ್ಧವಾಗಿದ್ದರೆ ಒಟ್ಟು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
ಮಲಬದ್ಧತೆ ಸಮಸ್ಯೆ ತಡೆಗಟ್ಟುತ್ತದೆ: ಈ ಮಲಬದ್ಧತೆ ಸಮಸ್ಯೆ ತಡೆಗಟ್ಟಲು ತುಂಬಾನೇ ಸಹಕಾರಿಯಾಗಿದೆ, ಇದರಲ್ಲಿರುವ ನಾರಿನಂಶ ಜೀರ್ಣಕ್ರಿಯೆ ಉತ್ತಮವಾಗಿ ನಡೆಯಲು ಸಹಕಾರಿಯಾಗಿದೆ.
ಕಿಡ್ನಿ ಸ್ಟೋನ್ ಹೊರ ಹಾಕಲು ಸಹಾಯ ಮಾಡುತ್ತದೆ: ಯಾರಿಗೆ ಕಿಡ್ನಿಸ್ಟೋನ್ ಸಮಸ್ಯೆ ಇದೆಯೋ ಅವರು ತಮ್ಮ ಆಹಾರಕ್ರಮದಲ್ಲಿ ಈ ಆಹಾರ ಸೇರಿಸಿದರೆ ತುಂಬಾ ಒಳ್ಳೆಯ ಪ್ರಯೋಜನ ಪಡೆಯಬಹುದು, ಮೂತ್ರದ ಮೂಲಕ ಕಿಡ್ನಿ ಸ್ಟೋನ್ ಹಾಕುತ್ತೆ, ಆರೋಗ್ಯ ವೃದ್ದಿಸಲು ತುಂಬಾನೇ ಸಹಕಾರಿಯಾಗಿದೆ. ಚಿಕ್ಕ ಕಿಡ್ನಿ ಸ್ಟೋನ್ ಯಾವುದೇ ಔಷಧಿ ತೆಗೆದುಕೊಳ್ಳದೆ ಈ ಆಹಾರ ಹೊರಹಾಕುತ್ತೆ, ಹಾಗಾಗಿ ಇಂಥ ಆಹಾರ ನಮ್ಮ ಆಹಾರಕ್ರಮದಲ್ಲಿ ಸೇರಿಸುವುದರಿಂದ ಕಿಡ್ನಿ ಸ್ಟೋನ್ ತಡೆಗಟ್ಟಲು ಸಹಕಾರಿಯಾಗಿದೆ.
ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ: ಬಾಳೆದಿಂಡು ಹಾಗೂ ಹೂವು ರಕ್ತದೊತ್ತಡ ನಿಯಂತ್ರಣದಲ್ಲಿಡಲು ತುಂಬಾನೇ ಸಹಕಾರಿಯಾಗಿದೆ.
ಮಧುಮೇಹಿಗಳಿಗೂ ತುಂಬಾ ಒಳ್ಳೆಯದು: ಈ ಬಾಳೆದಿಂಡು ಹಾಗೂ ಅದರ ಹೂವು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿಯಾಗಿರುವುದರಿಂದ ಮಧುಮೇಹಿಗಳಿಗೆ ತುಂಬಾ ಒಳ್ಳೆಯದು.



Click it and Unblock the Notifications