Latest Updates
-
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ
ಕಾಳು ಮೆಣಸಿನ ರಸಂ ರೆಸಿಪಿ: ಈ ರಸಂ ಕುಡಿದರೆ ಕೆಮ್ಮು, ಶೀತ ಓಡಿ ಹೋಗುತ್ತೆ ನೋಡಿ
ಮಳೆಗಾಲ ಜೊತೆಗೆ ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಯೂ ಹೆಚ್ಚುತ್ತಿದೆ, ಈ ಸಮಯದಲ್ಲಿ 'ನೀವು ಆರೋಗ್ಯಕ್ಕಾಗಿ ಕಡೆಗೆ ಗಮನಹರಿಸುವುದು ಒಳ್ಳೆಯದು. ಕಷಾಯ, ರಸಂ, ಕಾಳು ಮೆಣಸಿನ ರಸಂ ಇವೆಲ್ಲಾ ಕೆಮ್ಮು, ಗಂಟಲು ಕೆರೆತ, ಶೀತ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿಯಾಗಿದೆ. ಇಲ್ಲಿ ಕಾಳು ಮೆಣಸಿನ ರಸಂ ಹಾಗೂ ಸಾರಿನ ರೆಸಿಪಿ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿ
ಕಾಳು ಮೆಣಸು 2 ಚಮಚ (ತುಂಬಾ ಖಾರ ಇಷ್ಟಪಡುವುದಾದರೆ ಒಂದು ಚಮಚ ಕೂಡ ಹೆಚ್ಚು
ಬಳಸಬಹುದು)
ಚಮಚ ಜೀರಿಗೆ
ಹಣ್ಣಾದ ಟೊಮೆಟೊ 2-3
2 ಬೆಳ್ಳುಳ್ಳಿ
ಸ್ವಲ್ಪ ಸಾಸಿವೆ
2 ಒಣ ಮೆಣಸು
1 ಚಮಚ ಜೀರಿಗೆ
ಸ್ವಲ್ಪ ಕರಿಬೇವು
ಸ್ವಲ್ಪ ಹುಣಸೆಹಣ್ಣು
ನೀರು
1/2 ಕಪ್ ಬೇಳೆ
ಸ್ವಲ್ಪ ಕೊತ್ತಂಬರಿ ಸೊಪ್ಪು
ಎಣ್ಣೆ 1 ಚಮಚ
ಉಪ್ಪು
ಕಾಳು ಮೆಣಸಿನ ರಸಂ ಮಾಡುವ ವಿಧಾನ
ನೀವು ಕಾಳು ಮೆಣಸು ಸ್ವಲ್ಪ ಹುರಿದು ನಂತರ ಕುಟ್ಟಿ ಪುಡಿ ಮಾಡಿ, ಬೆಳ್ಳುಳ್ಳಿ
ಕೂಡ ಅಷ್ಟೇ ಜಜ್ಜಿ, ಜೀರಿಗೆ ಕೂಡ ರೋಸ್ಟ್ ಮಾಡಿ ಪುಡಿ ಮಾಡಿ.
ನೀವು ಟೊಮೆಟೊವನ್ನು ನೀರಿನಲ್ಲಿ ಹಾಕಿ ಬೇಯಿಸಿ
ನಂತರ ಅದನ್ನು ಸಿಪ್ಪೆ ಸುಲಿದು ಒಂದು ಬೌಲ್ಗೆ ಹಾಕಿ ಮ್ಯಾಶ್ ಮಾಡಿ
ಈಗ ನೀವು ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ, ನಂತರ ಸಾಸಿವೆ ಹಾಕಿ , ಸಾಸಿವೆ
ಚಟ್ ಪಟ್ ಶಬ್ದ ಮಾಡುವಾಗ ಜಜ್ಜಿದ ಕಾಳು ಮೆಣಸು, ಒಣಮೆಣಸು, ಬೆಳ್ಳುಳ್ಳಿ,
ಜೀರಿಗೆ ಹಾಕಿ ಟೊಮೆಟೊ ಪೇಸ್ಟ್ ಹಾಕಿ, ನಂತರ, ಉಪ್ಪು, ಅರಿಶಿಣ ಹಾಕಿ ಸ್ವಲ್ಪ
ನೀರು ಸೇರಿಸಿ ಕುದಿಸಿ, ಚೆನ್ನಾಗಿ ಕುದಿ ಬಂದಾಗ ಅದಕ್ಕೆ ಕೊತ್ತಂಬರಿ ಸೊಪ್ಪಿನಿಮದ
ಅಲಂಕರಿಸಿದರೆ ಕಾಳು ಮೆಣಸಿನ ರಸಂ ರೆಡಿ.
ಬೇಳೆ ಹಾಕಿ ಮಾಡುವ ಕಾಳು ಮೆಣಸಿನ ಸಾರು
ನೀವು ಬೇಳೆ ಮತ್ತು ಟೊಮೆಟೊಗೆ ಸ್ವಲ್ಪ ನೀರು ಹಾಕಿ, ಉಪ್ಪು ಹಾಕಿ,
ಬೆಳ್ಳುಳ್ಳಿ, ಕಾಳು ಮೆಣಸು, ಜೀರಿಗೆ ಪುಡಿ ಎಲ್ಲಾ ರೋಸ್ಟ್ ಮಾಡಿ ಜಜ್ಜಿ ಹಾಕಿ
ಬೇಯಿಸಿ
ನಂತರ ಮತ್ತೊಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ
ಸೇರಿಸಿ, ಬಳಿಕ ಈ ಬೇಯಿಸಿದ ರಂಸ ಹಾಕಿ ಸ್ವಲ್ಪ ಅರಿಶಿಣ ಪುಡಿ, ಕಾಶ್ಮೀರಿ ಖಾರದ
ಪುಡಿ ಸೇರಿಸಿ ಕುದಿಸಿದರೆ ಕಾಳು ಮೆಣಸಿನ ಸಾರು ರೆಡಿ. ರೆಡಿಯಾದ ಸಾರಿಗೆ ಸ್ವಲ್ಪ
ಕೊತ್ತಂಬರಿ ಸೊಪ್ಪು ಉದುರಿಸಿ ಸರ್ವ್ ಮಾಡಿ.
ಈ ರಸಮ ನೀವು ಹಾಗೆಯೇ ಸೇವಿಸಬಹುದು ಅಥವಾ ಅನ್ನದ ಜೊತೆ ಹಾಕಿ ತಿನ್ನಬಹುದು. ಇದರ ಸೇವನೆ ಮಾಡುವುದರಿಂದ ಶೀತ, ಕೆಮ್ಮು, ಗಂಟಲು ಕೆರೆತ ಕಡಿಮೆಯಾಗುವುದು, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು, ಹಾಗಾಗಿ ಮಳೆಗಾಲಕ್ಕೆ , ಚಳಿಗಾಲಕ್ಕೆ ಈ ರೆಸಿಪಿ ತುಂಬಾನೇ ಒಳ್ಳೆಯದು.
ಅಲ್ಲದೆ ಈ ರಸಂ ಸೇವನೆ ಜೀರ್ಣಕ್ರಿಯೂ ತುಂಬಾನೇ ಒಳ್ಳೆಯದು.



Click it and Unblock the Notifications