Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ಕಾಳು ಮೆಣಸಿನ ರಸಂ ರೆಸಿಪಿ: ಈ ರಸಂ ಕುಡಿದರೆ ಕೆಮ್ಮು, ಶೀತ ಓಡಿ ಹೋಗುತ್ತೆ ನೋಡಿ
ಮಳೆಗಾಲ ಜೊತೆಗೆ ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಯೂ ಹೆಚ್ಚುತ್ತಿದೆ, ಈ ಸಮಯದಲ್ಲಿ 'ನೀವು ಆರೋಗ್ಯಕ್ಕಾಗಿ ಕಡೆಗೆ ಗಮನಹರಿಸುವುದು ಒಳ್ಳೆಯದು. ಕಷಾಯ, ರಸಂ, ಕಾಳು ಮೆಣಸಿನ ರಸಂ ಇವೆಲ್ಲಾ ಕೆಮ್ಮು, ಗಂಟಲು ಕೆರೆತ, ಶೀತ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿಯಾಗಿದೆ. ಇಲ್ಲಿ ಕಾಳು ಮೆಣಸಿನ ರಸಂ ಹಾಗೂ ಸಾರಿನ ರೆಸಿಪಿ ನೀಡಿದ್ದೇವೆ ನೋಡಿ:

ಬೇಕಾಗುವ ಸಾಮಗ್ರಿ
ಕಾಳು ಮೆಣಸು 2 ಚಮಚ (ತುಂಬಾ ಖಾರ ಇಷ್ಟಪಡುವುದಾದರೆ ಒಂದು ಚಮಚ ಕೂಡ ಹೆಚ್ಚು
ಬಳಸಬಹುದು)
ಚಮಚ ಜೀರಿಗೆ
ಹಣ್ಣಾದ ಟೊಮೆಟೊ 2-3
2 ಬೆಳ್ಳುಳ್ಳಿ
ಸ್ವಲ್ಪ ಸಾಸಿವೆ
2 ಒಣ ಮೆಣಸು
1 ಚಮಚ ಜೀರಿಗೆ
ಸ್ವಲ್ಪ ಕರಿಬೇವು
ಸ್ವಲ್ಪ ಹುಣಸೆಹಣ್ಣು
ನೀರು
1/2 ಕಪ್ ಬೇಳೆ
ಸ್ವಲ್ಪ ಕೊತ್ತಂಬರಿ ಸೊಪ್ಪು
ಎಣ್ಣೆ 1 ಚಮಚ
ಉಪ್ಪು
ಕಾಳು ಮೆಣಸಿನ ರಸಂ ಮಾಡುವ ವಿಧಾನ
ನೀವು ಕಾಳು ಮೆಣಸು ಸ್ವಲ್ಪ ಹುರಿದು ನಂತರ ಕುಟ್ಟಿ ಪುಡಿ ಮಾಡಿ, ಬೆಳ್ಳುಳ್ಳಿ
ಕೂಡ ಅಷ್ಟೇ ಜಜ್ಜಿ, ಜೀರಿಗೆ ಕೂಡ ರೋಸ್ಟ್ ಮಾಡಿ ಪುಡಿ ಮಾಡಿ.
ನೀವು ಟೊಮೆಟೊವನ್ನು ನೀರಿನಲ್ಲಿ ಹಾಕಿ ಬೇಯಿಸಿ
ನಂತರ ಅದನ್ನು ಸಿಪ್ಪೆ ಸುಲಿದು ಒಂದು ಬೌಲ್ಗೆ ಹಾಕಿ ಮ್ಯಾಶ್ ಮಾಡಿ
ಈಗ ನೀವು ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ, ನಂತರ ಸಾಸಿವೆ ಹಾಕಿ , ಸಾಸಿವೆ
ಚಟ್ ಪಟ್ ಶಬ್ದ ಮಾಡುವಾಗ ಜಜ್ಜಿದ ಕಾಳು ಮೆಣಸು, ಒಣಮೆಣಸು, ಬೆಳ್ಳುಳ್ಳಿ,
ಜೀರಿಗೆ ಹಾಕಿ ಟೊಮೆಟೊ ಪೇಸ್ಟ್ ಹಾಕಿ, ನಂತರ, ಉಪ್ಪು, ಅರಿಶಿಣ ಹಾಕಿ ಸ್ವಲ್ಪ
ನೀರು ಸೇರಿಸಿ ಕುದಿಸಿ, ಚೆನ್ನಾಗಿ ಕುದಿ ಬಂದಾಗ ಅದಕ್ಕೆ ಕೊತ್ತಂಬರಿ ಸೊಪ್ಪಿನಿಮದ
ಅಲಂಕರಿಸಿದರೆ ಕಾಳು ಮೆಣಸಿನ ರಸಂ ರೆಡಿ.
ಬೇಳೆ ಹಾಕಿ ಮಾಡುವ ಕಾಳು ಮೆಣಸಿನ ಸಾರು
ನೀವು ಬೇಳೆ ಮತ್ತು ಟೊಮೆಟೊಗೆ ಸ್ವಲ್ಪ ನೀರು ಹಾಕಿ, ಉಪ್ಪು ಹಾಕಿ,
ಬೆಳ್ಳುಳ್ಳಿ, ಕಾಳು ಮೆಣಸು, ಜೀರಿಗೆ ಪುಡಿ ಎಲ್ಲಾ ರೋಸ್ಟ್ ಮಾಡಿ ಜಜ್ಜಿ ಹಾಕಿ
ಬೇಯಿಸಿ
ನಂತರ ಮತ್ತೊಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ, ಸಾಸಿವೆ ಮತ್ತು ಜೀರಿಗೆ
ಸೇರಿಸಿ, ಬಳಿಕ ಈ ಬೇಯಿಸಿದ ರಂಸ ಹಾಕಿ ಸ್ವಲ್ಪ ಅರಿಶಿಣ ಪುಡಿ, ಕಾಶ್ಮೀರಿ ಖಾರದ
ಪುಡಿ ಸೇರಿಸಿ ಕುದಿಸಿದರೆ ಕಾಳು ಮೆಣಸಿನ ಸಾರು ರೆಡಿ. ರೆಡಿಯಾದ ಸಾರಿಗೆ ಸ್ವಲ್ಪ
ಕೊತ್ತಂಬರಿ ಸೊಪ್ಪು ಉದುರಿಸಿ ಸರ್ವ್ ಮಾಡಿ.
ಈ ರಸಮ ನೀವು ಹಾಗೆಯೇ ಸೇವಿಸಬಹುದು ಅಥವಾ ಅನ್ನದ ಜೊತೆ ಹಾಕಿ ತಿನ್ನಬಹುದು. ಇದರ ಸೇವನೆ ಮಾಡುವುದರಿಂದ ಶೀತ, ಕೆಮ್ಮು, ಗಂಟಲು ಕೆರೆತ ಕಡಿಮೆಯಾಗುವುದು, ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು, ಹಾಗಾಗಿ ಮಳೆಗಾಲಕ್ಕೆ , ಚಳಿಗಾಲಕ್ಕೆ ಈ ರೆಸಿಪಿ ತುಂಬಾನೇ ಒಳ್ಳೆಯದು.
ಅಲ್ಲದೆ ಈ ರಸಂ ಸೇವನೆ ಜೀರ್ಣಕ್ರಿಯೂ ತುಂಬಾನೇ ಒಳ್ಳೆಯದು.



Click it and Unblock the Notifications