Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಬೇಸಿಗೆಯಲ್ಲಿ ದೇಹಕ್ಕೆ ತಂಪು, ಆರೋಗ್ಯಕ್ಕೆ ಪುಷ್ಠಿ ಈ ರಾಗಿ ಅಂಬಳಿ: ಹೀಗೆ ಮಾಡಿದರೆ ಸೂಪರ್ ಟೇಸ್ಟ್
Recipes
oi-Reena TK
Posted By: Reena TK
ಬೇಸಿಗೆಯಲ್ಲಿ ಪ್ರತಿದಿನ ಮನೆಯಲ್ಲಿ ಮಾಡಲೇಬೇಕಾದ ಪಾನೀಯ ರಾಗಿ ಅಂಬಳಿ, ರಾಗಿ ಅಂಬಳಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ, ಹೊಟ್ಟೆಗೆ ತುಂಬಾನೇ ತಂಪು , ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ರಾಗಿ ಅಂಬಳಿ ಮಾಡುವುದು ಹೇಗೆ ಎಂದು ನೋಡೋಣ:

ಬೇಕಾಗುವ ಸಾಮಗ್ರಿ
1 ಕಪ್ ರಾಗಿ ಅಂಬಳಿ
ಅರ್ಧ ಲೀಟರ್ ಮೊಸರು
2 ಲೀಟರ್ ನೀರು
2 ಈರುಳ್ಳಿ
2 ಹಸಿ ಮೆಣಸು
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
- ಅರ್ಧ ಲೀಟರ್ ಮೊಸರಿಗೆ ಅರ್ಧ ಲೀಟರ್ ನೀರು ಹಾಕಿ ಕಲೆಸಿ
- ನಂತರ ಸೌಟ್ನಿಂದ ತಿರುಗಿಸುತ್ತಾ ಕಲೆಸಿ
- ರಾಗಿ ಅಂಬಳಿ ಮಾಡುವುದು ಹೇಗೆ?
- ಒಂದು ಬಟ್ಟಲಿನಲ್ಲಿ ರಾಗಿ ಹಿಟ್ಟು ತೆಗೆದುಕೊಂಡು ಅದರಲ್ಲಿ ಅರ್ಧ ಕಪ್ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ
- ಹೀಗೆ ಕಲೆಸುವಾಗ ರಾಗಿ ಗಂಟು-ಗಂಟಾಗಿ ಇರಬಾರದು, ಚೆನ್ನಾಗಿ ಕಲೆಸಿ
- ನಂತರ ನೀವು ಒಂದೂವರೆ ಕಪ್ ನೀರನ್ನು ಹಾಕಿ ಕುದಿಸಿ, ನೀರು ಕುದಿ ಬರಲು ಪ್ರಾರಂಭಿಸಿದಾಗ ಮಿಕ್ಸ್ ಮಾಡಿಟ್ಟ ಹಿಟ್ಟು ಹಾಕಿ ಕಲೆಸಿ, ನಂತರ ರುಚಿಗೆ ತಕ್ಕ ಉಪ್ಪು ಸೇರಿಸಿ
- ರಾಗಿ ಮಾಲ್ಟ್ ರೀತಿಯಾದಾಗ ಉರಿ ಆಫ್ ಮಾಡಿ, ರಾಗಿ ತಣ್ಣಗಾದ ಮೇಲೆ ಅದಕ್ಕೆ ಮೊಸರಿಗೆ ನೀರು ಹಾಕಿ ಮಿಕ್ಸ್ ಮಾಡಿ ಮಾಡಿದ ಮಜ್ಜಿಗೆಯನ್ನು ಸೇರಿಸಿ ಮತ್ತೆ ಕಲೆಸಿ.
- ನಂತರ ಇದನ್ನು ಮಣ್ಣಿನ ಗ್ಲಾಸ್ಗೆ ಸುರಿಯಿರಿ
- ನಂತರ ಚಿಕ್ಕದಾಗಿ ಕತ್ತರಿಸಿಟ್ಟು ಈರುಳ್ಳಿ-ಹಸಿಮೆಣಸು ನೀವು ರಾಗಿ ಅಂಬಳಿ ಮೇಲೆ ಹಾಕಿ ಸರ್ವ್ ಮಾಡಿ, ಈ ರಾಗಿ ಅಂಬಳಿ ಕುಡಿಯಲು ತುಂಬಾ ರುಚಿಯಾಗಿರುತ್ತದೆ.
ರಾಗಿ ಅಂಬಳಿಯ ಪ್ರಯೋಜನಗಳು
- ದೇಹಕ್ಕೆ ತುಂಬಾ ತಂಪು, ಹಾಗಾಗಿ ಬೇಸಿಗೆಯಲ್ಲಿ ದೇಹವನ್ನು ರಕ್ಷಣೆ ಮಾಡುತ್ತದೆ, ಉಷ್ಣಾಂಶ ಹೆಚ್ಚಾದಾರೆ ಉಂಟಾಗುವ ಆರೋಗ್ಯ ಸಮಸ್ಯೆ ತಡೆಗಟ್ಟಲು ಸಹಕಾರಿ
- ಸುಸ್ತು ದೂರಾಗುವುದು
- ಬಾಯಾರಿಕೆ ದೂರಾಗುವುದು
- ಹಸಿವು ನಿಯಂತ್ರಿಸುತ್ತದೆ
- ರೋಗ ನಿರೋಧಕ ಶಕ್ತಿ ಹೆಚ್ಚುವುದು
- ರಕ್ತಹೀನತ ಸಮಸ್ಯೆ ತಡೆಗಟ್ಟುತ್ತದೆ
- ಮಲಬದ್ಧತೆ, ಅಜೀರ್ಣ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿ.
- ಮಕ್ಕಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
Comments
[ of 5 - Users]



Click it and Unblock the Notifications