Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ತೆಂಗಿನಕಾಯಿ ಬೆಲೆ ಹೆಚ್ಚಾಗಿದ್ಯಾ? ಕಾಯಿ ಬಳಸದೆ ಮಾಡುವ ಸಾಂಬಾರ್ ಇದು..!!
ಮಾರುಕಟ್ಟೆಯಲ್ಲಿ ತೆಂಗಿನಕಾಯಿ ದರ ದಿಢೀರ್ ಏರಿಕೆಯಾಗಿದೆ. ಒಂದೊಂದು ಕಾಯಿಯ ಬೆಲೆ ಕೇಳಿ ಗ್ರಾಹಕರು ಶಾಕ್ ಆಗುತ್ತಿದ್ದಾರೆ. ಅದರಲ್ಲೂ ಹಬ್ಬದ ಸೀಸನ್ ಆರಂಭಕ್ಕೂ ಮುನ್ನವೇ ಈ ತೆಂಗಿನಕಾಯಿಯ ದರ ದುಪ್ಪಟ್ಟಾಗಿದೆ. ಸಣ್ಣ ತೆಂಗಿನಕಾಯಿಯಿಂದ ಹಿಡಿದು ದೊಡ್ಡ ತೆಂಗಿನಕಾಯಿ ಕೂಡ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿದೆ. ಫಸಲು ಇಳಿಮುಖ ಆಗಿರುವು ದಿಢೀರ್ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.
ಇನ್ನು ತೆಂಗಿನಕಾಯಿ ಇಲ್ಲದೆ ಅಡುಗೆ ಕೆಲಸಗಳು ಮುಕ್ತಾಯ ಆಗೋದಿಲ್ಲ. ಸಾಂಬಾರ್ಗೆ, ಸಾರು, ಚಟ್ನಿ, ಪಲ್ಯ ಹೀಗೆ ಎಲ್ಲಾ ಖಾದ್ಯಕ್ಕೂ ತೆಂಗಿನಕಾಯಿ ಬಹಳ ಮುಖ್ಯ. ಅಡುಗೆ ರುಚಿ ಹೆಚ್ಚಿಸುವುದು ಕೂಡ ಇದೇ ತೆಂಗಿನಕಾಯಿ. ಆದ್ರೆ ನಿತ್ಯ ತೆಂಗಿನಕಾಯಿ ಬಳಸಿ ಸಾಂಬಾರ್, ಸಾರು ಮಾಡುವುದು ಈಗ ದುಬಾರಿಯಾಗುತ್ತಿದೆ. ಹಾಗಾದ್ರೆ ತೆಂಗಿನಕಾಯಿ ಬಳಸದೆಯೇ ಸಾರು ಮಾಡುವುದು ಹೇಗೆ ಅನ್ನೋದನ್ನು ನಾವಿಂದು ತಿಳಿಯೋಣ.

ಕಾಯಿ ಬಳಸದೆಯೂ ಅದ್ಭುತ ರುಚಿಯ ಸಾರು ಮಾಡಬಹುದು. ಇದು ಅನ್ನದ ಜೊತೆಗೆ ಸವಿಯಲು ಅದ್ಭುತವಾಗಿರುತ್ತೆ. ಹಾಗಾದ್ರೆ ಕಾಯಿ ಬಳಸದೆಯೇ ಸಾರು ಮಾಡುವುದು ಹೇಗೆ? ಈ ಸಾರು ಮಾಡಲು ಯಾವೆಲ್ಲಾ ಪದಾರ್ಥಗಳು ಬೇಕು? ಮಾಡುವ ವಿಧಾನವೇನು? ಎಷ್ಟು ಸಮಯ ಹಿಡಿಯಲಿದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ತೆಂಗಿನಕಾಯಿ ಹಾಕದೆ ಸಾರು ಮಾಡಲು ಯಾವೆಲ್ಲಾ ವಸ್ತುಗಳು ಬೇಕು?
- ಸೀಮೆ ಬದನೆಕಾಯಿ
- ಟೊಮೆಟೋ
- ತೊಗರಿ ಬೇಳೆ
- ಸಾಸಿವೆ
- ಜೀರಿಗೆ
- ಅರಶಿಣ
- ಸಾಂಬಾರ್ ಪುಡಿ
- ಖಾರದ ಪುಡಿ
- ಕರಿಬೇವು
- ಎಣ್ಣೆ
- ಉಪ್ಪು
- ಬೆಲ್ಲ
ತೆಂಗಿನಕಾಯಿ ಹಾಕದೆ ಸಾರು ಮಾಡುವ ವಿಧಾನವೇನು?
ಮೊದಲು ಸೀಮೆ ಬದನೆಕಾಯಿಯನ್ನು ಚೆನ್ನಾಗಿ ತೊಳೆದುಕೊಂಡು ಸನ್ಣದಾಗಿ ಹೆಚ್ಚಿಕೊಳ್ಳಿ. ಹಾಗೆ ತೊಗರಿ ಬೇಳೆಯನ್ನು ಕೂಡ ತೊಳೆದುಕೊಳ್ಳಿ. ಈಗ ಒಲೆ ಮೇಲೆ ಒಂದು ಕುಕ್ಕರ್ ಇಟ್ಟು ಅದಕ್ಕೆ ಸೀಮೆ ಬದನೆ, ತೊಗರಿ ಬೇಳೆ, ನೀರು, ಟೊಮೆಟೋ, ಅರಶಿಣ, ಉಪ್ಪು ಎಣ್ಣೆ ಹಾಕಿ ಮಿಕ್ಸ್ ಮಾಡಿಕೊಂಡು ಕುಕ್ಕರ್ ಮುಚ್ಚಳ ಮುಚ್ಚಿ 5 ಸೀಟಿ ಹೊಡೆಯಲು ಬಿಡಿ.
5 ಸೀಟಿ ಬಳಿಕ ಕುಕ್ಕರ್ ಮುಚ್ಚಳ ತೆಗದು ಒಮ್ಮೆ ಮಿಕ್ಸ್ ಮಾಡಿಕೊಳ್ಳಿ. ಹಾಗೆ ಟೊಮೆಟೋ ಇಡಿಯಾಗಿದ್ದರೆ ಅದನ್ನು ಸ್ವಲ್ಪ ಪುಡಿ ಮಾಡುವಂತೆ ತಿರುಗಿಸಿಕೊಳ್ಳಿ. ಈಗ ಒಲೆ ಮೇಲೆ ಒಂದು ಪಾತ್ರೆ ಇಟ್ಟು ಅದಕ್ಕೆ ಎಣ್ಣೆ ಹಾಕಿ ಕಾಯಲು ಬಿಡಿ ಎಣ್ಣೆ ಕಾದ ಬಳಿಕ, ಸಾಸಿವೆ, ಜೀರಿಗೆ, ಬೆಳ್ಳುಳ್ಳಿ, ಒಣ ಮೆಣಸು, ಕರಿವೇವು, ಈರುಳ್ಳಿ ಹಾಕಿಕೊಂಡು ಚೆನ್ನಾಗಿ ಫ್ರೈ ಮಾಡಿ. ಉರಿಯನ್ನು ಸಣ್ಣದಾಗಿ ಇಟ್ಟು ಇದಕ್ಕೆ ಸಾಂಬಾರ್ ಪುಡಿ ಹಾಗೂ ಖಾರದ ಪುಡಿ ಕೂಡ ಹಾಕಿ 30 ಸೆಕೆಂಡ್ಗಳ ಕಾಲ ಫ್ರೈ ಮಾಡಿ.
ಈಗ ಸ್ವಲ್ಪ ನಿಂಬೆ ರಸವನ್ನು ಇದಕ್ಕೆ ಹಾಕಿ ಕುದಿಯಲು ಬಿಡಿ. ಇದು ಕುದಿಯಲು ಆರಂಭಿಸಿದಾಗ ಕುಕ್ಕರ್ನಲ್ಲಿರುವ ಬೇಳೆ ತರಕಾರಿಯನ್ನು ಇದಕ್ಕೆ ಹಾಕಿ ರುಚಿಗೆ ತಕ್ಕಷ್ಟು ಉಪ್ಪು ಕೂಡ ಹಾಕಿಕೊಂಡು ಮಿಕ್ಸ್ ಮಾಡಿಕೊಳ್ಳಿ. ಹಾಗೆ ಕುದಿ ಬರಲು ಬಿಡಿ. ಕೊನೆಯಲ್ಲಿ ಸಣ್ಣ ಉಂಡೆಯ ಬೆಲ್ಲ ಹಾಕಿಕೊಳ್ಳಬಹುದು. ಹಾಗೆ ಕೊತ್ತಂಬರಿ ಸೊಪ್ಪು ಹಾಕಿ ಒಂದು ಕುದಿಬಂದ ಬಳಿಕ ಇಳಿಸಿಕೊಳ್ಳಿ. ಇಷ್ಟಾದರೆ ಕಾಯಿ ಬಳಸದೆ ಮಾಡುವ ಅದ್ಭುತ ಸಾರು ರೆಡಿಯಾಗುತ್ತೆ. ನೀವು ಕೂಡ ಈ ರೆಸಿಪಿಯನ್ನು ಮಾಡಿ.



Click it and Unblock the Notifications