Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಮನೆಯಲ್ಲಿ ಸತ್ಯನಾರಾಯಣ ಪೂಜೆ ಪ್ರಸಾದ ಮಾಡುವುದು ಹೇಗೆ? ತುಂಬಾನೆ ಸಿಂಪಲ್
ಹಿಂದೂ ಸಂಸ್ಕೃತಿಯಲ್ಲಿ ಹಲವು ಪೂಜೆ ಪುನಸ್ಕಾರಗಳಿಗೆ ಅದರದ್ದೇ ಆದ ವೈಶಿಷ್ಟ್ಯವಿದೆ. ಪೂಜೆ ಸಮಯದಲ್ಲಿ ಮಾಡುವ ತೀರ್ಥ ಪ್ರಸಾದಕ್ಕೂ ಅದರದ್ದೇ ಆದ ಪ್ರಾಮುಖ್ಯತೆ ಇದೆ. ಕೆಲವು ಬಾರಿ ಪ್ರಸಾದವಾಗಿ ನೀಡುವ ತಿಂಡಿ ಎಷ್ಟು ರುಚಿಯಾಗಿರುತ್ತೆ ಅಂದ್ರೆ ಪದೇ ಪದೇ ಸವಿಯಬೇಕು ಎನಿಸುತ್ತೆ. ಇನ್ನು ಕೆಲವು ದೇವಸ್ಥಾನಗಳು ಈ ಪ್ರಸಾದಗಳಿಂದಲೇ ಫೇಮಸ್ ಆಗಿರುತ್ತವೆ.
ಈಗ ನಾವು ಹೇಳಹೊರಟಿರೋದು ಸತ್ಯನಾರಾಯಣ ಪೂಜೆ ವೇಳೆ ನೀಡುವ ಪ್ರಸಾದ. ನೀವು ಸತ್ಯನಾರಾಯಣ ಪೂಜೆ ಸಮಯದಲ್ಲಿ ನೀಡುವ ಪ್ರಸಾದವನ್ನು ಸವಿದಿರಬಹುದು. ಎಷ್ಟು ರುಚಿಯಾಗಿರುತ್ತೆ ಅಂದ್ರೆ ಎರಡು ಬಾರಿ ಮೂರು ಬಾರಿ ತೆಗೆದುಕೊಂಡು ಸವಿಯುವವರು ಇದ್ದಾರೆ. ನಾವು ಚಿಕ್ಕವರಿದ್ದಾಗ ಪ್ರಸಾದ ಸವಿಯಲೆಂದೇ ಸತ್ಯನಾರಾಯಣ ಪೂಜೆಗೆ ಹೋಗುತ್ತಿದ್ದ ನೆನೆಪು ಮತ್ತೆ ಕಣ್ಮುಂದೆ ಬರುತ್ತೆ.

ಈ ಸತ್ಯನಾರಾಯಣ ಪೂಜೆ ವೇಳೆ ನೀಡುವ ಪ್ರಸಾದ ಹೇಗೆ ಮಾಡುತ್ತಾರೆ? ಅದು ಇಷ್ಟೊಂದು ರುಚಿಯಾಗಿರಲು ಯಾವ ಪದಾರ್ಥ ಹಾಕುತ್ತಾರೆ. ಮಾಡುವುದು ಹೇಗೆ ಎಂಬ ಕುರಿತು ನಾವಿಂದು ತಿಳಿದುಕೊಳ್ಳೋಣ. ಜೊತೆಗೆ ನಾವೇ ಮನೆಯಲ್ಲಿ ಮಾಡಿ ಸವಿಯಲು ಪ್ರಯತ್ನಿಸೋಣ.
ಸತ್ಯನಾರಾಯಣ ಪೂಜೆ ಪ್ರಸಾದ ಮಾಡಲು ಬೇಕಾಗುವ ಪದಾರ್ಥಗಳು
- ಚಿರೋಟಿ ರವೆ - ಅರ್ಧ ಕಪ್ 100 ಗ್ರಾಮ್
- ಹಾಲು
- ನೀರು
- ತುಪ್ಪ
- ಸಕ್ಕರೆ
- ಲವಂಗ
- ಏಲಕ್ಕಿ ಪುಡಿ
- ಬಾಳೆಹಣ್ಣು
- ದ್ರಾಕ್ಷಿ
- ಗೋಡಂಬಿ
- ಬಾದಾಮಿ
ಸತ್ಯನಾರಾಯಣ ಪೂಜೆ ಪ್ರಸಾದ ಮಾಡುವುದು ಹೇಗೆ ?
ಮೊದಲು ಒಲೆ ಮೇಲೆ ಪಾತ್ರೆಯಿಟ್ಟು ಚಿರೋಟಿ ರವೆ ಹುರಿದುಕೊಳ್ಳಬೇಕು. ರವೆ ಬ್ರೌನ್ ಕಲರ್ ಬರುವವರೆಗೂ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ಹುರಿಯುವಾಗ ತುಪ್ಪ ಬಳಸಿ. ಇನ್ನೊಂದು ಕಡೆ ಡ್ರೈ ಫ್ರೂಟ್ಸ್ಗಳನ್ನು ತುಪ್ಪದಲ್ಲಿ ಹುರಿದುಕೊಳ್ಳಿ. ಹುರಿದ ಬಳಿಕ ಬದಿಗಿಟ್ಟುಕೊಳ್ಳಿ.
ಇದೆಲ್ಲಾ ಆದ ಬಳಿಕ ರವೆಗೆ ಸರಿಯಾದ ಪ್ರಯಾಣದಲ್ಲಿ ನೀರು ಮತ್ತು ಕಾಯಿಸಿದ ಹಾಲನ್ನು ಹಾಕಿಕೊಳ್ಳಿ. ರವೆ ತೆಗೆದುಕೊಂಡ ಕಪ್ನಲ್ಲಿಯೇ ಒಂದೂವರೆ ಕಪ್ ನೀರು ಒಂದೂವರೆ ಕಪ್ ಹಾಲು ಹಾಕಿಕೊಳ್ಳಿ. ಈ ವೇಳೆ ಸಕ್ಕರೆ ಹಾಕಿಕೊಳ್ಳಿ. ಈ ಹದ ಇದು ಗಟ್ಟಿಯಾಗುವಷ್ಟು ಹಂತ ತಲುಪಿದ ಬಳಿಕ ಅದಕ್ಕೆ ಹುರಿದುಕೊಂಡಿರುವ ಡ್ರೈ ಫ್ರೂಟ್ಸ್ ಹಾಕಿಕೊಳ್ಳಿ.
ಡ್ರೈ ಫ್ರೂಟ್ಸ್ ಹಾಕಿ, ಜೊತೆಗೆ ಬಾಳೆಹಣ್ಣು ಚಿಕ್ಕದಾಗಿ ಕತ್ತರಿಸಿಕೊಂಡು ಅದಕ್ಕೆ ಹಾಕಿ, ಒಂದು ನಿಮಿಷ ಕಾಯಿಸಿಕೊಳ್ಳಿ. ಇಷ್ಟಾದರೆ ನಿಮ್ಮ ಮುಂದೆ ರುಚಿ ರುಚಿಯ ಸತ್ಯನಾರಾಯಣ ಪ್ರಸಾದ ರೆಡಿಯಾಗುತ್ತದೆ. ಇದನ್ನು ಪೂಜೆ ವೇಳೆ ನೈವೇದ್ಯ ಮಾಡಿ ಬಳಿಕ ಸವಿಯಬಹುದು.
ಈ ಪ್ರಸಾದವನ್ನು ಸತ್ಯನಾರಾಯಣ ಪೂಜೆ ಬಳಿಕ ಭಕ್ತರಿಗೆ ನೀಡಲಾಗುತ್ತದೆ. ಇದರ ರುಚಿಗೆ ಚಿಕ್ಕವರು, ಹಿರಿಯರು ಅನ್ನದೆ ಮನಸೋಲುತ್ತಾರೆ. ಚಿಕ್ಕ ಮಕ್ಕಳಂತು ಈ ಪ್ರಸಾದದ ರುಚಿಗೆ ಮನಸೋಲುತ್ತಾರೆ. ನೀವು ಸಹ ಸಮಯ ಸಿಕ್ಕಾಗ ಈ ಖಾದ್ಯ ಮಾಡಿ ಸವಿಯಬಹುದು.
ಸತ್ಯನಾರಾಯಣ ಪೂಜೆ ಮಾಡಿಸುವುದು ಏಕೆ?
ಯಾವುದೇ ಶುಭ ಕಾರ್ಯಕ್ಕೆ ಮುನ್ನ ಮನೆಯಲ್ಲಿ ಸತ್ಯನಾರಾಯಣ ಪೂಜೆ
ಮಾಡಿಸುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ತುಂಬಿಕೊಳ್ಳುತ್ತದೆ ಎಂಬ ಬಲವಾದ
ನಂಬಿಕೆ ಇದೆ.
ಮದುವೆ, ನಿಧ್ಚಿತಾರ್ಥ ಈ ರೀತಿಯ ಕಾರ್ಯಕ್ರಮದ ಮುಂಚೆ ಸತ್ಯನಾರಾಯಣ ಪೂಜೆ
ಮಾಡಿಸುವುದರಿಂದ ಹೊಸ ಜೋಡಿಯ ಬದುಕಿಗೆ ಒಳಿತಾಗುತ್ತದೆ.
ಗೃಹ ಪ್ರವೇಶ ಮಾಡುವಾಗ ಈ ಪೂಜೆ ಮಾಡುವುದರಿಂದ ಮನೆಗೆ
ಒಳಿತಾಗುತ್ತದೆ.
ಯಾವುದಾದರೂ ವ್ಯವಹಾರ ಮಾಡುವ ಮುನ್ನ ಸತ್ಯ ನಾರಾಯಣ ಪೂಜೆ ಮಾಡಿಸಿದರೆ
ಅದರಲ್ಲಿ ಯಶಸ್ಸು ಲಭಿಸುವುದು. ಜೊತೆಗೆ ಸತ್ಯನಾರಾಯಣ ಸ್ವಾಮಿ ಅನುಗ್ರಹಕ್ಕೆ
ಕಾರಣರಾಗಬೇಕಾದರೆ ಈ ವ್ರತ ಮಾಡಿಸಬೇಕು ಎಂಬ ಮಾತಿದೆ.



Click it and Unblock the Notifications