Latest Updates
-
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
Headline for Deeplink -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್
ಮಹಾಶಿವರಾತ್ರಿಗೆ ಮಾಡಿ ಕಡ್ಲೆ ತಂಬಿಟ್ಟು: ಬಹಳ ಸುಲಭದ ಸಿಹಿ ತಿಂಡಿ ಇದು!
ಶಿವರಾತ್ರಿ ಹಬ್ಬ ಆಗಮಿಸಿದೆ. ಶಿವನ ಆಶೀರ್ವಾದ ಪಡೆಯಲು ಈ ಸಮಯದಲ್ಲಿ ದೇವಾಲಯ ಭೇಟಿ ಮಾಡುವುದು, ಮನೆಯಲ್ಲಿ ಶಿವನ ಪೂಜೆ ಮಾಡುವುದು ಸಾಮಾನ್ಯ. ಈ ವಿಶೇಷ ಸಂದರ್ಭದಲ್ಲಿ ಶಿವನಿಗೆ ವಿಶೇಷ ಪೂಜೆಯಿಂದ ನಿಮಗೆ ಅದೃಷ್ಟ ಒಲಿಯಲಿದೆ. ಹಾಗೆ ನಿಮ್ಮ ಹಲವು ಸಮಸ್ಯೆಗಳಿಗೆ ಪರಿಹಾರ ಪಡೆಯುವ ಸಮಯವೂ ಇದಾಗುತ್ತದೆ. ಹಾಗೆ ಈ ಹಬ್ಬದ ಸಮಯದಲ್ಲಿ ನಾವು ವಿಶೇಷ ರೀತಿಯಲ್ಲಿ ಮಾಡುವಂತಹ ತಂಬಿಟ್ಟು ಮಾಡುವ ಕುರಿತು ತಿಳಿಯೋಣ. ಅದ್ರಲ್ಲೂ ಹಬ್ಬಕ್ಕೆ ಮಾಡುವ ವಿಭಿನ್ನ ರುಚಿಯ ಕಡ್ಲೆ ತಂಬಿಟ್ಟು ಮಾಡೋದು ಹೇಗೆ ಅನ್ನೋದು ನಿಮಗೆ ಗೊತ್ತಾ?
ನೀವು ಸಹ ಅಂಗಡಿಗಳಲ್ಲಿ ಸಿಗುವ ವಿವಿಧ ಬಗೆಯ ತಂಬಿಟ್ಟು ಉಂಡೆಯನ್ನು ಸವಿದಿರುತ್ತೀರಿ. ಅದ್ರಲ್ಲೂ ಹಬ್ಬಗಳಲ್ಲಿ ನೀವು ಮನೆಯಲ್ಲೂ ಮಾಡಿ ಸವಿದಿರುತ್ತೀರಿ. ಉತ್ತರ ಕರ್ನಾಟಕ ಭಾಗದಲ್ಲಿ ಈ ತಂಬಿಟ್ಟು ಉಂಡೆ ಬಹಳ ಫೇಮಸ್ ಖಾದ್ಯಗಳಲ್ಲಿ ಒಂದು. ಯಾವುದೇ ಹಬ್ಬವಾಗಿದ್ದರೂ ಈ ತಂಬಿಟ್ಟು ಉಂಡೆ ಮಾಡಿ ಸವಿದಿರುತ್ತಾರೆ. ಹಾಗೆ ಬಗೆ ಬಗೆಯ ತಂಬಿಟ್ಟು ಸವಿಯೋದು ಸಹ ಇದೆ.
ಈ ತಂಬಿಟ್ಟನ್ನು ನೀವು ಬಹಳ ಸಮಯ ಇಟ್ಟು ಸವಿಯಬಹುದು, ಬಹುಬೇಗ ಹಾಳಾಗುವುದೂ ಇಲ್ಲ. ಹೀಗಾಗಿ ಮನೆಯಲ್ಲಿ ಒಮ್ಮೆ ಮಾಡಿಟ್ಟು ಹಲವು ದಿನಗಳ ಕಾಲ ಸವಿಯೋದು ನೋಡಬಹುದು. ಮಕ್ಕಳಿಗೂ ಇದು ಬಹಳ ಇಷ್ಟವಾಗುವ ತಿಂಡಿ. ಇದಲ್ಲದೆ ಮಾಡುವುದು ಕೂಡ ಬಹಳ ಸುಲಭ. ಹೀಗಾಗಿ ನಾವಿಂದು ಈ ಹಬ್ಬದ ಸಮಯದಲ್ಲಿ ಕೂಡ ಈ ಕಡಲೆ ತಂಬಿಟ್ಟು ಮಾಡುವ ಕುರಿತಾಗಿ ತಿಳಿದುಕೊಳ್ಳೋಣ.
ಕಡ್ಲೆ ತುಂಬಿಟ್ಟು ಮಾಡಲು ಯಾವೆಲ್ಲಾ ವಸ್ತುಗಳು ಬೇಕು?
- ಹುರಿಗಡಲೆ
- ಕಡಲೆ ಬೀಜ
- ಏಲಕ್ಕಿ
- ಎಣ್ಣೆ
- ಎಳ್ಳು
- ಬೆಲ್ಲ
ಕಡ್ಲೆ ತುಂಬಿಟ್ಟು ಮಾಡುವ ವಿಧಾನವೇನು?
ಒಲೆ ಮೇಲೆ ಬಾಣಲೆ ಇಟ್ಟು ಅದಕ್ಕೆ 2 ಕಪ್ ಹುರಿಗಡಲೆ ಹಾಕಿ 1 ನಿಮಿಷ ಬಿಸಿ ಮಾಡಿಕೊಳ್ಳಿ. ನಂತರ ಒಲೆ ಆಫ್ ಮಾಡಿ ಹುರಿಗಡಲೆಯನ್ನು ಮಿಕ್ಸಿ ಜಾರ್ಗೆ ಹಾಕಿಕೊಳ್ಳಿ. ನಂತರ ಇದಕ್ಕೆ ಕಾಲು ಚಮಚ ಏಲಕ್ಕಿ ಬೀಜ ಸಹ ಹಾಕಿ ನುಣ್ಣಗೆ ಪುಡಿ ಮಾಡಿಕೊಂಡ ಪುಡಿಯನ್ನು ತೆಗೆದು ಬೌಲ್ಗೆ ಹಾಕಿಟ್ಟುಕೊಳ್ಳಿ. ಈಗ ಒಲೆ ಮೇಲೆ ಬಾಣಲೆ ಇಟ್ಟು ಅದಕ್ಕೆ ಒಂದು ಕಪ್ ಕಡಲೆ ಬೀಜ ಹಾಕಿ ಹುರಿದುಕೊಳ್ಳಿ.
ಈಗ ಹುರಿದ ಕಾಳುಗಳಿಂದ ಸಿಪ್ಪೆ ಬೇರ್ಪಡಿಸಬೇಕು ಯಾವ ವಿಧಾನವನ್ನಾದರು ಬಳಸಿ ಚಿಪ್ಪೆ ತೆಗೆದು ಕಾಳನ್ನು ಒಡೆದುಕೊಳ್ಳಿ. ಈಗ ಈ ಕಡಲೆಯನ್ನು ಮಿಕ್ಸಿ ಜಾರ್ಗೆ ಹಾಕಿ ತರಿ ತರಿಯಾಗಿ ಪುಡಿ ಮಾಡಿಕೊಳ್ಳಬೇಕು. ಅನಂತರ ಈ ಪುಡಿಯನ್ನು ಸಹ ಹುರಿಗಡಲೆ ಪುಡಿಯೊಂದಿಗೆ ಸೇರಿಸಿ ಮಿಕ್ಸ್ ಮಾಡಿ. ಈಗ ಮತ್ತೆ ಬಾಣಲೆಗೆ ಅರ್ಧ ಕಪ್ ಬಿಳಿ ಎಳ್ಳು ಹಾಕಿ 2 ನಿಮಿಷ ಹುರಿದು ಇದನ್ನು ಸಹ ಹಿಟ್ಟಿನೊಂದಿಗೆ ಸೇರಿಸಿ ಮಿಶ್ರಣ ಮಾಡಿ.
ಈಗ 1 ಕಪ್ ಕೊಬ್ಬರಿ ತುರಿ ಹಾಕಿ ಮಿಶ್ರಣ ಮಾಡಿ. ಈಗ ಮತ್ತೆ ಬಾಣಲೆಗೆ ಒಂದೂವರೆ ಕಪ್ ಬೆಲ್ಲ ಹಾಕಿ ನೀರು ಹಾಕಿ ಕರಗಲು ಬಿಡಿ. ಬೆಲ್ಲ ಚೆನ್ನಾಗಿ ಕರಗುವರೆಗೂ ತಿರುಗಿಸಿಕೊಂಡು ಬಳಿಕ ಜರಡಿ ಹಿಡಿದು ಹಿಟ್ಟಿಗೆ ಹಾಕಿ ಮಿಕ್ಸ್ ಮಾಡಿ. ಎಷ್ಟು ಅಗತ್ಯವೋ ಅಷ್ಟು ಬೆಲ್ಲದ ನೀರು ಹಾಕಿ ಉಂಡೆ ಕಟ್ಟಿಕೊಳ್ಳಿ. ನಿಮಗೆ ಯಾವ ಗಾತ್ರಕ್ಕೆ ಬೇಕೋ ಆ ಗಾತ್ರಕ್ಕೆ ಉಂಡೆ ಕಟ್ಟಿಕೊಳ್ಳಿ.
ಹಿಟ್ಟು ಗಟ್ಟಿಯಾದರೆ ಮತ್ತೆ ಬೆಲ್ಲದ ನೀರು ಹಾಕಿಕೊಂಡು ಉಂಡೆ ಕಟ್ಟಿಕೊಳ್ಳಿ. ಇಷ್ಟಾದರೆ ನಿಮ್ಮ ಮುಂದೆ ರುಚಿ ರುಚಿಯಾದ ತಂಬಿಟ್ಟು ಉಂಡೆ ಸಿದ್ದವಾಗುತ್ತೆ. ಈ ಹಬ್ಬದಲ್ಲಿ ನೀವು ಸಹ ಮಾಡಿ ಸವಿದು ನೋಡಿ.



Click it and Unblock the Notifications
