Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಮಹಾಶಿವರಾತ್ರಿಗೆ ಮಾಡಿ ಕಡ್ಲೆ ತಂಬಿಟ್ಟು: ಬಹಳ ಸುಲಭದ ಸಿಹಿ ತಿಂಡಿ ಇದು!
ಶಿವರಾತ್ರಿ ಹಬ್ಬ ಆಗಮಿಸಿದೆ. ಶಿವನ ಆಶೀರ್ವಾದ ಪಡೆಯಲು ಈ ಸಮಯದಲ್ಲಿ ದೇವಾಲಯ ಭೇಟಿ ಮಾಡುವುದು, ಮನೆಯಲ್ಲಿ ಶಿವನ ಪೂಜೆ ಮಾಡುವುದು ಸಾಮಾನ್ಯ. ಈ ವಿಶೇಷ ಸಂದರ್ಭದಲ್ಲಿ ಶಿವನಿಗೆ ವಿಶೇಷ ಪೂಜೆಯಿಂದ ನಿಮಗೆ ಅದೃಷ್ಟ ಒಲಿಯಲಿದೆ. ಹಾಗೆ ನಿಮ್ಮ ಹಲವು ಸಮಸ್ಯೆಗಳಿಗೆ ಪರಿಹಾರ ಪಡೆಯುವ ಸಮಯವೂ ಇದಾಗುತ್ತದೆ. ಹಾಗೆ ಈ ಹಬ್ಬದ ಸಮಯದಲ್ಲಿ ನಾವು ವಿಶೇಷ ರೀತಿಯಲ್ಲಿ ಮಾಡುವಂತಹ ತಂಬಿಟ್ಟು ಮಾಡುವ ಕುರಿತು ತಿಳಿಯೋಣ. ಅದ್ರಲ್ಲೂ ಹಬ್ಬಕ್ಕೆ ಮಾಡುವ ವಿಭಿನ್ನ ರುಚಿಯ ಕಡ್ಲೆ ತಂಬಿಟ್ಟು ಮಾಡೋದು ಹೇಗೆ ಅನ್ನೋದು ನಿಮಗೆ ಗೊತ್ತಾ?
ನೀವು ಸಹ ಅಂಗಡಿಗಳಲ್ಲಿ ಸಿಗುವ ವಿವಿಧ ಬಗೆಯ ತಂಬಿಟ್ಟು ಉಂಡೆಯನ್ನು ಸವಿದಿರುತ್ತೀರಿ. ಅದ್ರಲ್ಲೂ ಹಬ್ಬಗಳಲ್ಲಿ ನೀವು ಮನೆಯಲ್ಲೂ ಮಾಡಿ ಸವಿದಿರುತ್ತೀರಿ. ಉತ್ತರ ಕರ್ನಾಟಕ ಭಾಗದಲ್ಲಿ ಈ ತಂಬಿಟ್ಟು ಉಂಡೆ ಬಹಳ ಫೇಮಸ್ ಖಾದ್ಯಗಳಲ್ಲಿ ಒಂದು. ಯಾವುದೇ ಹಬ್ಬವಾಗಿದ್ದರೂ ಈ ತಂಬಿಟ್ಟು ಉಂಡೆ ಮಾಡಿ ಸವಿದಿರುತ್ತಾರೆ. ಹಾಗೆ ಬಗೆ ಬಗೆಯ ತಂಬಿಟ್ಟು ಸವಿಯೋದು ಸಹ ಇದೆ.
ಈ ತಂಬಿಟ್ಟನ್ನು ನೀವು ಬಹಳ ಸಮಯ ಇಟ್ಟು ಸವಿಯಬಹುದು, ಬಹುಬೇಗ ಹಾಳಾಗುವುದೂ ಇಲ್ಲ. ಹೀಗಾಗಿ ಮನೆಯಲ್ಲಿ ಒಮ್ಮೆ ಮಾಡಿಟ್ಟು ಹಲವು ದಿನಗಳ ಕಾಲ ಸವಿಯೋದು ನೋಡಬಹುದು. ಮಕ್ಕಳಿಗೂ ಇದು ಬಹಳ ಇಷ್ಟವಾಗುವ ತಿಂಡಿ. ಇದಲ್ಲದೆ ಮಾಡುವುದು ಕೂಡ ಬಹಳ ಸುಲಭ. ಹೀಗಾಗಿ ನಾವಿಂದು ಈ ಹಬ್ಬದ ಸಮಯದಲ್ಲಿ ಕೂಡ ಈ ಕಡಲೆ ತಂಬಿಟ್ಟು ಮಾಡುವ ಕುರಿತಾಗಿ ತಿಳಿದುಕೊಳ್ಳೋಣ.
ಕಡ್ಲೆ ತುಂಬಿಟ್ಟು ಮಾಡಲು ಯಾವೆಲ್ಲಾ ವಸ್ತುಗಳು ಬೇಕು?
- ಹುರಿಗಡಲೆ
- ಕಡಲೆ ಬೀಜ
- ಏಲಕ್ಕಿ
- ಎಣ್ಣೆ
- ಎಳ್ಳು
- ಬೆಲ್ಲ
ಕಡ್ಲೆ ತುಂಬಿಟ್ಟು ಮಾಡುವ ವಿಧಾನವೇನು?
ಒಲೆ ಮೇಲೆ ಬಾಣಲೆ ಇಟ್ಟು ಅದಕ್ಕೆ 2 ಕಪ್ ಹುರಿಗಡಲೆ ಹಾಕಿ 1 ನಿಮಿಷ ಬಿಸಿ ಮಾಡಿಕೊಳ್ಳಿ. ನಂತರ ಒಲೆ ಆಫ್ ಮಾಡಿ ಹುರಿಗಡಲೆಯನ್ನು ಮಿಕ್ಸಿ ಜಾರ್ಗೆ ಹಾಕಿಕೊಳ್ಳಿ. ನಂತರ ಇದಕ್ಕೆ ಕಾಲು ಚಮಚ ಏಲಕ್ಕಿ ಬೀಜ ಸಹ ಹಾಕಿ ನುಣ್ಣಗೆ ಪುಡಿ ಮಾಡಿಕೊಂಡ ಪುಡಿಯನ್ನು ತೆಗೆದು ಬೌಲ್ಗೆ ಹಾಕಿಟ್ಟುಕೊಳ್ಳಿ. ಈಗ ಒಲೆ ಮೇಲೆ ಬಾಣಲೆ ಇಟ್ಟು ಅದಕ್ಕೆ ಒಂದು ಕಪ್ ಕಡಲೆ ಬೀಜ ಹಾಕಿ ಹುರಿದುಕೊಳ್ಳಿ.
ಈಗ ಹುರಿದ ಕಾಳುಗಳಿಂದ ಸಿಪ್ಪೆ ಬೇರ್ಪಡಿಸಬೇಕು ಯಾವ ವಿಧಾನವನ್ನಾದರು ಬಳಸಿ ಚಿಪ್ಪೆ ತೆಗೆದು ಕಾಳನ್ನು ಒಡೆದುಕೊಳ್ಳಿ. ಈಗ ಈ ಕಡಲೆಯನ್ನು ಮಿಕ್ಸಿ ಜಾರ್ಗೆ ಹಾಕಿ ತರಿ ತರಿಯಾಗಿ ಪುಡಿ ಮಾಡಿಕೊಳ್ಳಬೇಕು. ಅನಂತರ ಈ ಪುಡಿಯನ್ನು ಸಹ ಹುರಿಗಡಲೆ ಪುಡಿಯೊಂದಿಗೆ ಸೇರಿಸಿ ಮಿಕ್ಸ್ ಮಾಡಿ. ಈಗ ಮತ್ತೆ ಬಾಣಲೆಗೆ ಅರ್ಧ ಕಪ್ ಬಿಳಿ ಎಳ್ಳು ಹಾಕಿ 2 ನಿಮಿಷ ಹುರಿದು ಇದನ್ನು ಸಹ ಹಿಟ್ಟಿನೊಂದಿಗೆ ಸೇರಿಸಿ ಮಿಶ್ರಣ ಮಾಡಿ.
ಈಗ 1 ಕಪ್ ಕೊಬ್ಬರಿ ತುರಿ ಹಾಕಿ ಮಿಶ್ರಣ ಮಾಡಿ. ಈಗ ಮತ್ತೆ ಬಾಣಲೆಗೆ ಒಂದೂವರೆ ಕಪ್ ಬೆಲ್ಲ ಹಾಕಿ ನೀರು ಹಾಕಿ ಕರಗಲು ಬಿಡಿ. ಬೆಲ್ಲ ಚೆನ್ನಾಗಿ ಕರಗುವರೆಗೂ ತಿರುಗಿಸಿಕೊಂಡು ಬಳಿಕ ಜರಡಿ ಹಿಡಿದು ಹಿಟ್ಟಿಗೆ ಹಾಕಿ ಮಿಕ್ಸ್ ಮಾಡಿ. ಎಷ್ಟು ಅಗತ್ಯವೋ ಅಷ್ಟು ಬೆಲ್ಲದ ನೀರು ಹಾಕಿ ಉಂಡೆ ಕಟ್ಟಿಕೊಳ್ಳಿ. ನಿಮಗೆ ಯಾವ ಗಾತ್ರಕ್ಕೆ ಬೇಕೋ ಆ ಗಾತ್ರಕ್ಕೆ ಉಂಡೆ ಕಟ್ಟಿಕೊಳ್ಳಿ.
ಹಿಟ್ಟು ಗಟ್ಟಿಯಾದರೆ ಮತ್ತೆ ಬೆಲ್ಲದ ನೀರು ಹಾಕಿಕೊಂಡು ಉಂಡೆ ಕಟ್ಟಿಕೊಳ್ಳಿ. ಇಷ್ಟಾದರೆ ನಿಮ್ಮ ಮುಂದೆ ರುಚಿ ರುಚಿಯಾದ ತಂಬಿಟ್ಟು ಉಂಡೆ ಸಿದ್ದವಾಗುತ್ತೆ. ಈ ಹಬ್ಬದಲ್ಲಿ ನೀವು ಸಹ ಮಾಡಿ ಸವಿದು ನೋಡಿ.



Click it and Unblock the Notifications

